ಬ್ರೇಕಿಂಗ್ ನ್ಯೂಸ್
28-12-25 09:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.28 : ದುರಾಡಳಿತ ಮತ್ತು ವ್ಯಾಪಕ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಲ್ಲ 25 ಗ್ರಾಮ ಪಂಚಾಯಿತಿಗಳ ವಿರುದ್ಧ ಇದೇ ಮೊದಲ ಬಾರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ಇತಿಹಾಸದಲ್ಲಿ ಇಂತಹ ಕ್ರಮ ಕೈಗೊಂಡಿರುವುದು ಇದೇ ಮೊದಲು.
ಸೆಪ್ಟೆಂಬರ್ 30 ಮತ್ತು ಡಿಸೆಂಬರ್ 2 ರಂದು ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನಂತರ ಉಪ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಈಗ ಅವರು ಜಿಲ್ಲಾಡಳಿತ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇಡೀ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ.
ಇದು ಕೇವಲ ಆರಂಭವಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಲು ಜಿಲ್ಲಾ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ಗಳಲ್ಲಿ ಸುಧಾರಣೆಗಳನ್ನು ತರಲು, ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಸರಿಪಡಿಸಲು ತುಮಕೂರು ಮತ್ತು ಮಂಡ್ಯದಂತಹ ಜಿಲ್ಲೆಗಳಲ್ಲಿ ಮುಂದಿನ ಕ್ರಮ ಜರುಗಿಸಲು ಯೋಜಿಸಿದ್ದಾರೆ.
ಚರಂಡಿಗಳ ನಿರ್ವಹಣೆ, ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು, ಘನತ್ಯಾಜ್ಯ ನಿರ್ವಹಣೆ, ಮಾಲಿನ್ಯ ಮತ್ತು ಅತಿಕ್ರಮಣದಿಂದ ಜಲಮೂಲಗಳ ಸಂರಕ್ಷಣೆ ಮತ್ತು ಅಕ್ರಮ ಗಣಿಗಾರಿಕೆ ಮತ್ತಿತರ ವಿಷಯಗಳ ಕುರಿತು ನ್ಯಾಯಮೂರ್ತಿ ವೀರಪ್ಪ ಪರಿಶೀಲಿಸುತ್ತಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್ಗಳು, ಡೇಟಾ ಎಂಟ್ರಿ ಆಪರೇಟರ್ಗಳು, ತಾಂತ್ರಿಕ ಸಹಾಯಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳು ಮತ್ತು ಗ್ರಾಮ ಪಂಚಾಯಿತಿಗಳ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಿರಿಯ ಎಂಜಿನಿಯರ್ಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಇಬ್ಬರು ಪಿಡಿಓಗಳ ಅಮಾನತು
ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರ್ವೇಶ್ ಕೆ. ವಿರುದ್ಧವೂ ದೂರು ದಾಖಲಾಗಿದೆ. ಇಬ್ಬರು PDO ಗಳನ್ನು ಅಮಾನತು ಗೊಳಿಸಲಾಗಿದೆ. ಬೋರ್ವೆಲ್ ದುರಸ್ತಿಗಾಗಿ ಗುತ್ತಿಗೆದಾರರಿಗೆ 68 ಲಕ್ಷ ರೂ. ದುರ್ಬಳಕೆ ಮತ್ತು 6.69 ಲಕ್ಷ ರೂ. ಬಿಡುಗಡೆ ಮಾಡದ ಅರಿಕುಂಟೆ ಪಿಡಿಓ ಎ.ಎನ್.ಶಂಕರಪ್ಪ ಮತ್ತು ಕರ್ತವ್ಯ ಲೋಪಕ್ಕಾಗಿ ನಂಬಿಹಳ್ಳಿ ಪಿಡಿಓ ಮಂಜುನಾಥ್ ಎನ್.ಕೆ ಅವರನ್ನು ಅಮಾನತುಗೊಳಿಸಲಾಗಿದೆ.
ಮಾಡದ ಕಾಮಗಾರಿಗೆ ಹಣ ಬಿಡುಗಡೆ
ದಳಸನೂರು ಗ್ರಾ.ಪಂ.ನಲ್ಲಿ 2019-2020ರಲ್ಲಿ ರಸ್ತೆ ನಿರ್ಮಾಣಕ್ಕೆ 3 ಲಕ್ಷ ರೂ. ವೆಚ್ಚ ಮಾಡಲಾಗಿತ್ತು. ಆದರೆ ಅದು ಅಸ್ತಿತ್ವದಲ್ಲಿಲ್ಲ. ಚರಂಡಿಗಳ ಹೂಳು ತೆಗೆಯಲು ಹಣ ಪಾವತಿಸಲಾಗಿದೆ, ಆದರೆ ಯಾವುದೇ ಕೆಲಸ ಮಾಡಿಲ್ಲ ಎಂದು ದೂರುದಾರರೊಬ್ಬರು ಉಲ್ಲೇಖಿಸಿದ್ದಾರೆ. ಅಲ್ಲದೇ ಮನರೇಗಾ ಅಡಿಯಲ್ಲಿ ಮಾಡಿಲ್ಲದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. 15ನೇ ಹಣಕಾಸು ಕಾರ್ಯಕ್ರಮದಡಿ ಚರಂಡಿಗಳ ಸ್ವಚ್ಛತೆ ಮತ್ತು ನೈರ್ಮಲ್ಯ ನಿರ್ವಹಣೆಗೆ ಯಾವುದೇ ಲೆಕ್ಕಪತ್ರಗಳನ್ನು ನಿರ್ವಹಿಸಿಲ್ಲ. ಆರರಲ್ಲಿ ಮೂರು ಕೆರೆಗಳು ಒತ್ತುವರಿಯಾಗಿದ್ದು, ಕಾಮಗಾರಿ ಅನುಷ್ಠಾನಕ್ಕೆ ಕೊಟೇಶನ್ ಇಲ್ಲದೇ ಬಿಲ್ ಕ್ಲಿಯರ್ ಮಾಡಲಾಗಿದೆ.
In an unprecedented move in Karnataka’s history, Upa Lokayukta Justice B. Veerappa has filed a suo motu corruption case against all 25 gram panchayats in Srinivaspura taluk of Kolar district. The action follows surprise inspections conducted on September 30 and December 2, revealing widespread mismanagement and large-scale corruption.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am