ಬ್ರೇಕಿಂಗ್ ನ್ಯೂಸ್
30-12-25 05:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ದಂಪತಿಯ ಪುತ್ರ ರೈಹಾನ್ ವಾದ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ರೈಹಾನ್ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ. ಇವರ ಸಂಬಂಧಕ್ಕೆ ಉಭಯ ಕುಟುಂಬಗಳೂ ಹಸಿರು ನಿಶಾನೆ ತೋರಿಸಿದ್ದು, ಶೀಘ್ರದಲ್ಲೇ ವಿವಾಹದ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.


ರೈಹಾನ್ ವಾದ್ರಾ ವೃತ್ತಿಯಲ್ಲಿ ಒಬ್ಬ ಪರಿಣಿತ ಛಾಯಾಗ್ರಾಹಕ. ತನ್ನ ಹತ್ತನೇ ವಯಸ್ಸಿಗೇ ಕ್ಯಾಮೆರಾ ಕೈಗೆತ್ತಿಕೊಂಡ ರೈಹಾನ್ ವನ್ಯಜೀವಿ, ಬೀದಿ ಛಾಯಾಗ್ರಹಣ ಮತ್ತು ಕಮರ್ಷಿಯಲ್ ಫೋಟೋಗ್ರಫಿಯಲ್ಲಿ ಗುರುತಿಸಿದ್ದಾರೆ. ಹಾಗೆಯೇ ಅವಿವಾ ಬೇಗ್ ಮೂಲತಃ ದೆಹಲಿ ಮೂಲದವರಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ ಆಗಿದ್ದಾರೆ. ದೆಹಲಿಯಲ್ಲಿ 'ಅಟೆಲಿಯರ್ 11' ಎಂಬ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದಾರೆ.
ಇದಲ್ಲದೆ ರಾಷ್ಟ್ರಮಟ್ಟದ ಮಾಜಿ ಫುಟ್ಬಾಲ್ ಆಟಗಾರ್ತಿ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದು ಶೀಘ್ರದಲ್ಲೇ ಮದುವೆ ದಿನಾಂಕವನ್ನು ಕುಟುಂಬ ಘೋಷಣೆ ಮಾಡಲಿದೆ. ರೈಹಾನ್ ವಾದ್ರಾ ಡೆಹ್ರಾಡೂನ್ನ ದಿ ಡೂನ್ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಅದೇ ಶಾಲೆಯಲ್ಲಿ ಅಧ್ಯಯನ ನಡೆಸಿದ್ದರು. ನಂತರ ಉನ್ನತ ಶಿಕ್ಷಣಕ್ಕಾಗಿ ಲಂಡನ್ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್ ಗೆ ತೆರಳಿದ್ದರು.
Raihan Vadra, son of Priyanka Gandhi and Robert Vadra, has gotten engaged to his childhood friend and longtime partner Aviva Baig. The couple, together for over seven years, exchanged rings in a private ceremony attended by close family. Raihan, a professional photographer, and Aviva, a photographer and producer, are expected to announce their wedding date soon.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm