ಬ್ರೇಕಿಂಗ್ ನ್ಯೂಸ್
31-12-25 10:57 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.31 : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ಬಿಜೆಪಿ ತನ್ನ ಸತ್ಯಶೋಧನಾ ಸಮಿತಿ ರಚಿಸಿದ್ದು, ವಿವರವಾದ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ.
ಸರ್ಕಾರಿ ಭೂಮಿ ಅತಿಕ್ರಮಣ ತೆರವುಗೊಳಿಸುವ ಅಭಿಯಾನದ ಭಾಗವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಬುಧವಾರ "ಸತ್ಯ ಶೋಧನಾ ಸಮಿತಿ"ಯನ್ನು ರಚಿಸಿದ್ದಾರೆ. ಏಳು ಸದಸ್ಯರ ಈ ಸಮಿತಿಯು ಶಾಸಕರಾದ ಎಸ್.ಆರ್ ವಿಶ್ವನಾಥ್ ಮತ್ತು ಎಸ್ ಮುನಿರಾಜು ಸೇರಿದಂತೆ ಬಿಜೆಪಿ ಶಾಸಕರು ಮತ್ತು ನಾಯಕರನ್ನು ಒಳಗೊಂಡಿದೆ.
ಬೆಂಗಳೂರು ನಗರ ಉತ್ತರ ಭಾಗದ ಯಲಹಂಕದ ಕೋಗಿಲು ಬಳಿಯ ಫಕೀರ್ ಕಾಲೋನಿ ಮತ್ತು ವಾಸಿಂ ಲೇಔಟ್ನಲ್ಲಿ ಮನೆಗಳನ್ನು ಕೆಡವಿದ ಹಿಂದಿನ ಸತ್ಯ ಅರಿಯಲು ಸಮಿತಿಯನ್ನು ರಚಿಸಲಾಗಿದೆ ಎಂದು ವಿಜಯೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಮಿತಿಯು ಸ್ಥಳಕ್ಕೆ ಭೇಟಿ ನೀಡಿ, ವಿಚಾರಣೆ ನಡೆಸಿ ಒಂದು ವಾರದೊಳಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಡಿಸೆಂಬರ್ 20 ರಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಪ್ರಸ್ತಾವಿತ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕಾಗಿ ಅತಿಕ್ರಮಣಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಯಾವುದೇ ಅಧಿಕೃತ ಅನುಮತಿಯಿಲ್ಲದೆ ಮನೆಗಳನ್ನು ನಿರ್ಮಿಸಲಾಗಿದೆ ಎಂಬುದನ್ನು ಮನಗಂಡು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬುಧವಾರ ಕೋಗಿಲು ಬಡಾವಣೆಗೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, 'ಕಾಂಗ್ರೆಸ್ ಸರ್ಕಾರವು ತನ್ನ ಓಲೈಕೆ ರಾಜಕೀಯದಿಂದಾಗಿ ರಾಜ್ಯದಲ್ಲಿ 'ಮಿನಿ ಬಾಂಗ್ಲಾದೇಶ'ವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು. ಅಕ್ರಮ ಮನೆಗಳನ್ನು ಕೆಡವಿದರೂ ಇನ್ಯಾರದ್ದೋ ಒತ್ತಡದಿಂದ ಹೊರ ರಾಜ್ಯಗಳ ಜನರಿಗೆ ಮನೆಗಳನ್ನು ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ, ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಸರ್ಕಾರ ಕೇವಲ ಮುಸ್ಲಿಂ ಓಲೈಕೆಗಾಗಿ ಈ ರೀತಿ ಮಾಡುತ್ತಿದ್ದಾರೆ. ಹಾಗಾದ್ರೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಮನೆ ಕಳಕೊಂಡ 13 ಸಾವಿರ ಮಂದಿಗೆ ಏನು ಮಾಡುತ್ತದೆ, ಅವರು ಮನುಷ್ಯರಲ್ವಾ ಎಂದು ಪ್ರಶ್ನಿಸಿದರು.
The BJP has formed a seven-member fact-finding committee to investigate the demolition of alleged illegal migrant homes in Bengaluru’s Kogilu Layout. Karnataka BJP president B.Y. Vijayendra directed the committee to inspect the site and submit a detailed report within a week.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm