ಬ್ರೇಕಿಂಗ್ ನ್ಯೂಸ್
30-12-20 08:40 pm Mangaluru Correspondent ಕರ್ನಾಟಕ
ಬೆಂಗಳೂರು, ಡಿ.30: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟಣೆ ವಿಚಾರದಲ್ಲಿ ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತವಾಗಿರುತ್ತದೆ. ಆದರೆ, ಕೆಲವು ಟಿವಿ ವಾಹಿನಿಗಳು ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯ ರೀತಿ ಪ್ರಸಾರ ಮಾಡುತ್ತಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ.

ಅಲ್ಲದೆ, ಪಕ್ಷ ರಹಿತ ಚುನಾವಣೆ ಆಗಿರುವ ಸಂದರ್ಭದಲ್ಲಿ ಯಾವುದೇ ಆಧಾರ ಇಲ್ಲದೆ ರಾಜಕೀಯ ಪಕ್ಷಗಳ ಪರ ಫಲಿತಾಂಶ ಪ್ರಸಾರ ಮಾಡಬಾರದು. ಈ ಬಗ್ಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಸೂಚನೆ ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಿಗೆ ರಾಜ್ಯ ಚುನಾವಣಾ ಆಯೋಗದಿಂದ ಸುತ್ತೋಲೆ ಮೂಲಕ ನಿರ್ದೇಶನ ನೀಡಲಾಗಿದೆ.
ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಡಿ.31 ರ ವರೆಗೂ ನಡೆಯಲಿದೆ. ಈ ಮಧ್ಯೆ ಪ್ರಸಾರ ಮಾಧ್ಯಮಗಳು ನಿರ್ದಿಷ್ಟ ರಾಜಕೀಯ ಪಕ್ಷಗಳು ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾಗಿ ಪ್ರಕಟ ಮಾಡುವಂತಿಲ್ಲ ಎಂದಿದ್ದರೂ, ಪಕ್ಷಗಳ ಬೆಂಬಲಿತರು ಎನ್ನುವ ನೆಲೆಯಲ್ಲಿ ಪ್ರಸಾರ ಮಾಡುತ್ತಿವೆ. ಈ ವೇಳೆ, ಹೆಚ್ಚಿನ ಬಾರಿ ರಾಜಕೀಯ ಪಕ್ಷಗಳ ನಾಯಕರು ಕೂಡ ತಮ್ಮ ಪಕ್ಷಗಳಿಗೇ ಗೆಲುವು ಅನ್ನುವ ನೆಲೆಯಲ್ಲಿ ಹೇಳಿಕೆ ನೀಡುತ್ತಾರೆ. ಅಲ್ಲದೆ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತಾರೆ. ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ಬಾವುಟ ಹಿಡಿದು ವಿಜಯೋತ್ಸವ ಆಚರಣೆಯೂ ನಡೆಯುತ್ತದೆ. ಈ ವೇಳೆ, ಮಾಧ್ಯಮಗಳು ಕೂಡ ಅದನ್ನೇ ಪ್ರಸಾರ ಮಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಎಚ್ಚರಿಸಬೇಕಾದ ಮಾಧ್ಯಮಗಳು ಅದನ್ನೇ ಪ್ರಸಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ಪರೋಕ್ಷವಾಗಿ ಚಾಟಿ ಬೀಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm