ಬ್ರೇಕಿಂಗ್ ನ್ಯೂಸ್
30-12-20 08:40 pm Mangaluru Correspondent ಕರ್ನಾಟಕ
ಬೆಂಗಳೂರು, ಡಿ.30: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟಣೆ ವಿಚಾರದಲ್ಲಿ ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತವಾಗಿರುತ್ತದೆ. ಆದರೆ, ಕೆಲವು ಟಿವಿ ವಾಹಿನಿಗಳು ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯ ರೀತಿ ಪ್ರಸಾರ ಮಾಡುತ್ತಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ.

ಅಲ್ಲದೆ, ಪಕ್ಷ ರಹಿತ ಚುನಾವಣೆ ಆಗಿರುವ ಸಂದರ್ಭದಲ್ಲಿ ಯಾವುದೇ ಆಧಾರ ಇಲ್ಲದೆ ರಾಜಕೀಯ ಪಕ್ಷಗಳ ಪರ ಫಲಿತಾಂಶ ಪ್ರಸಾರ ಮಾಡಬಾರದು. ಈ ಬಗ್ಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಸೂಚನೆ ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಿಗೆ ರಾಜ್ಯ ಚುನಾವಣಾ ಆಯೋಗದಿಂದ ಸುತ್ತೋಲೆ ಮೂಲಕ ನಿರ್ದೇಶನ ನೀಡಲಾಗಿದೆ.
ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಡಿ.31 ರ ವರೆಗೂ ನಡೆಯಲಿದೆ. ಈ ಮಧ್ಯೆ ಪ್ರಸಾರ ಮಾಧ್ಯಮಗಳು ನಿರ್ದಿಷ್ಟ ರಾಜಕೀಯ ಪಕ್ಷಗಳು ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾಗಿ ಪ್ರಕಟ ಮಾಡುವಂತಿಲ್ಲ ಎಂದಿದ್ದರೂ, ಪಕ್ಷಗಳ ಬೆಂಬಲಿತರು ಎನ್ನುವ ನೆಲೆಯಲ್ಲಿ ಪ್ರಸಾರ ಮಾಡುತ್ತಿವೆ. ಈ ವೇಳೆ, ಹೆಚ್ಚಿನ ಬಾರಿ ರಾಜಕೀಯ ಪಕ್ಷಗಳ ನಾಯಕರು ಕೂಡ ತಮ್ಮ ಪಕ್ಷಗಳಿಗೇ ಗೆಲುವು ಅನ್ನುವ ನೆಲೆಯಲ್ಲಿ ಹೇಳಿಕೆ ನೀಡುತ್ತಾರೆ. ಅಲ್ಲದೆ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತಾರೆ. ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ಬಾವುಟ ಹಿಡಿದು ವಿಜಯೋತ್ಸವ ಆಚರಣೆಯೂ ನಡೆಯುತ್ತದೆ. ಈ ವೇಳೆ, ಮಾಧ್ಯಮಗಳು ಕೂಡ ಅದನ್ನೇ ಪ್ರಸಾರ ಮಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಎಚ್ಚರಿಸಬೇಕಾದ ಮಾಧ್ಯಮಗಳು ಅದನ್ನೇ ಪ್ರಸಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ಪರೋಕ್ಷವಾಗಿ ಚಾಟಿ ಬೀಸಿದೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm