ಬ್ರೇಕಿಂಗ್ ನ್ಯೂಸ್
03-01-26 10:40 pm Bangalore Correspondent ಕರ್ನಾಟಕ
ಬೆಂಗಳೂರು, ಜ.3 : ಜನಾರ್ದನ ರೆಡ್ಡಿ ಅವರು ದೊಡ್ಡ ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಬೇಕಾದಲ್ಲಿ ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ, ಸುಲಭದಲ್ಲಿ ಕೊಲ್ಲುವುದಕ್ಕೆ ಸಾಧ್ಯವೇ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಜನಾರ್ದನ ರೆಡ್ಡಿ ತನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ಮಾಡಿದ ಆರೋಪಕ್ಕೆ ಡಿಕೆಶಿ ಹೀಗೆಂದು ಕೌಂಟರ್ ನೀಡಿದ್ದಾರೆ.
ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯ ಪುತ್ಥಳಿ ನಿರ್ಮಿಸುತ್ತಿದ್ದು ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ, ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಜನಾರ್ದನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ ಎಂದು ಡಿಸಿಎಂ ಪ್ರಶ್ನಿಸಿದ್ದಾರೆ. ಪಕ್ಷದ ವತಿಯಿಂದ ಅಲ್ಲಿನ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಘಟನೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ನನಗೆ ಈ ಘಟನೆ ತಿಳಿದ ತಕ್ಷಣ ಎಸ್ಪಿ ಜೊತೆ ಮಾತನಾಡಿದ್ದೇನೆ. ಎಸ್ಪಿ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೆ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್ಪಿ, ಐಜಿ ಮತ್ತು ಶಾಸಕರ ಜೊತೆಗೂ ಮಾತನಾಡಿದ್ದೇನೆ ಎಂದು ಡಿಸಿಎಂ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ, ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ನನಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅಲ್ಲಿ ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ.
ಬಳ್ಳಾರಿಯಲ್ಲಿ ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನು ಆಗಿದೆ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm