ಬ್ರೇಕಿಂಗ್ ನ್ಯೂಸ್
05-01-26 08:39 pm Bangalore Correspondent ಕರ್ನಾಟಕ
ಬೆಂಗಳೂರು, ಜ.5 : ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಮಂಗಳೂರು ಮೂಲದ ಸಾಫ್ಟ್ವೇರ್ ಉದ್ಯೋಗಿ ಯುವತಿಯೊಬ್ಬಳು ಉಸಿರು ಗಟ್ಟಿ ಮೃತಪಟ್ಟ ಘಟನೆ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮಂಗಳೂರಿನ ಕಾವೂರು ಮೂಲದ ಶರ್ಮಿಳಾ (34) ಮೃತ ಯುವತಿ.
ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ ಮೆಂಟ್ನಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ ಮೆಂಟ್ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದು ಮನೆ ಸಮೀಪದ ಸಾಫ್ಟ್ ವೇರ್ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಇದ್ದುದರಿಂದ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಶರ್ಮಿಳಾ ಒಬ್ಬರೇ ಮನೆಯಲ್ಲಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಮನೆಯ ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ. ಪಕ್ಕದ ಕೋಣೆಯಲ್ಲಿದ್ದ ಶರ್ಮಿಳಾ ಕೂಡಲೇ ಆ ಕೋಣೆಗೆ ತೆರಳಿದ್ದು ಅದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಹೀಗಾಗಿ ಕತ್ತಲೆಯಲ್ಲಿ ಕಿಟಕಿ, ಬಾಗಿಲು ತೆರೆಯಲು ಸಾಧ್ಯವಾಗದೆ ಮನೆಯಲ್ಲಿ ಪೂರ್ತಿ ಹೊಗೆ ಆವರಿಸಿತ್ತು. ಹೊರಗೆ ಹೋಗಲು ಸಾಧ್ಯವಾಗದೆ ಯುವತಿ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಶರ್ಮಿಳಾ ಒಂದು ವರ್ಷದ ಹಿಂದೆ ಕೆಲಸ ಅರಸಿ ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದು ಇದೀಗ ದುರಂತ ರೀತಿ ಸಾವಿಗೀಡಾಗಿದ್ದಾರೆ. ಮನೆಯ ರೂಮ್ ನಲ್ಲಿದ್ದ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟು ಹೋಗಿವೆ.
A 34-year-old software engineer from Mangaluru, Sharmila, died after inhaling dense smoke caused by a sudden fire in her apartment at Subramanya Layout, RM Nagar limits. The incident occurred around 11 pm on Saturday when a suspected short circuit triggered flames and heavy smoke inside her room.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm