ಬ್ರೇಕಿಂಗ್ ನ್ಯೂಸ್
06-01-26 12:57 pm Bangalore Correspondent ಕರ್ನಾಟಕ
ಬೆಂಗಳೂರು, ಜ 06 : ಬೆಂಗಳೂರಿನ ಚಿತ್ರಮಂದಿರವೊಂದರ ಮಹಿಳಾ ಟಾಯ್ಲೆಟ್ ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಚಿತ್ರೀಕರಣ ನಡೆಸುತ್ತಿದ್ದ ಯುವಕ ಹಾಗೂ ಅಪ್ರಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಮಡಿವಾಳದಲ್ಲಿರುವ ಸಂಧ್ಯಾ ಥಿಯೇಟರ್ ನಲ್ಲಿ ಈ ಘಟನೆ ನಡೆದಿದ್ದು, ಥಿಯೇಟರ್ ಬಾತ್ ರೂಮ್ನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಟೆಕ್ಕಿ ದೂರಿನ ಮೇರೆಗೆ ವಿಡಿಯೋ ಮಾಡಿದ ಬಾಲಕನನ್ನು ಬಂಧಿಸಿದ್ದಾರೆ.


ಮೂಲಗಳ ಪ್ರಕಾರ ಭಾನುವಾರ ಜನವರಿ 4ರಂದು ರಾತ್ರಿ 9:30ಕ್ಕೆ ಮಡಿವಾಳದ ಸಂಧ್ಯಾ ಚಿತ್ರಮಂದಿರಲ್ಲಿ ಈ ಘಟನೆ ನಡೆದಿದೆ. ಇಂಟರ್ವೆಲ್ ವೇಳೆ ವಾಶ್ ರೂಂಗೆ ಹೋದಾಗ ಮಹಿಳಾ ಟೆಕ್ಕಿ ಹಾಗೂ ಸ್ನೇಹಿತೆಯರ ಖಾಸಗಿ ವಿಡಿಯೋವನ್ನು ಬಾಲಕ ಚಿತ್ರೀಕರಣ ಮಾಡಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಕೂಡಲೇ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೆಲ ದಿನಗಳಿಂದಲೂ ಆತನ ಸ್ನೇಹಿತ ಆರೋಪಿ ಕಮಲ್ ತನಗೆ ವಿಡಿಯೋ ಚಿತ್ರೀಕರಿಸಲು ಸೂಚಿಸಿರುವುದಾಗಿ ಪೊಲೀಸರ ಮುಂದೆ ಅಪ್ರಾಪ್ತ ಬಾಯ್ದಿಟ್ಟಿದ್ದಾನೆ. ಸದ್ಯ ಆರೋಪಿ ಬಾಲಕ, ಕಮಲ್ ಹಾಗೂ ಸಂಧ್ಯಾ ಥಿಯೇಟರ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಆರೋಪಿಯ ಮೊಬೈಲ್ ಫೋನ್ನಲ್ಲಿ ಕೆಲ ವಿಡಿಯೋಗಳು ಪತ್ತೆಯಾಗಿದ್ದು, ಹಲವು ದಿನಗಳಿಂದ ಕೃತ್ಯ ಎಸಗುತ್ತಿದ್ದ ಬಗ್ಗೆ ಶಂಕೆಯಿದೆ. ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A shocking incident occurred at Sandhya Theatre in Madiwala, where a minor boy was caught secretly recording videos inside the women’s restroom. A woman techie filed a complaint after she and her friends noticed the boy filming during the movie interval on January 4 at around 9:30 PM.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am