ಬ್ರೇಕಿಂಗ್ ನ್ಯೂಸ್
07-01-26 08:00 pm HK News Desk ಕರ್ನಾಟಕ
ಹಾವೇರಿ, ಜ.7 : ಸುದೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ದಾಖಲೆ ಮುರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬುಧವಾರ ಹಾವೇರಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡ ಉದ್ಘಾಟಿಸಿ, ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ಇನ್ನೂ ಎಷ್ಟು ದಿನ ಸಕ್ರಿಯವಾಗಿರುತ್ತೇನೆಂದು ಗೊತ್ತಿಲ್ಲ ಎಂದಿದ್ದಾರೆ. ಜನರ ಆಶೀರ್ವಾದ ಇರುವವರೆಗೂ ರಾಜಕೀಯದಲ್ಲಿಯೇ ಇರುತ್ತೇನೆ ಎಂದು ಪ್ರತಿಪಾದಿಸಿದ ಸಿಎಂ, ತಮ್ಮ ಆಡಳಿತದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.


"ರಾಜಕೀಯದಲ್ಲಿರಲು ಜನರ ಆಶೀರ್ವಾದ ಬೇಕು. ನಾನು ಜನರ ಆಶೀರ್ವಾದದಿಂದಲೇ ಇಲ್ಲಿಯವರೆಗೆ ಬಂದಿದ್ದೇನೆ. ಆದರೆ ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೆ ಎಂದು ನನಗೆ ಗೊತ್ತಿಲ್ಲ ಎಂದರು. ಸಿದ್ದರಾಮಯ್ಯ ಅವರ ಸಾಧನೆ ಶೂನ್ಯ ಮತ್ತು ಅವರು ರಾಜ್ಯದ ಖಜಾನೆ ಖಾಲಿ ಮಾಡಿದ್ದಾರೆ ಎಂದು ಟೀಕಿಸಿದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ವಿರೋಧ ಪಕ್ಷದ ನಾಯಕರು ಸುಳ್ಳು ಹೇಳುವುದರಲ್ಲಿ ಪರಿಣಿತರು ಮತ್ತು ಅವರು ಅದನ್ನು ಮಾಡುತ್ತಲೇ ಇದ್ದಾರೆ ಎಂದು ತಿರುಗೇಟು ನೀಡಿದರು.
"SCP/TSP ಕಾಯ್ದೆಯನ್ನು ಯಾರು ಜಾರಿಗೆ ತಂದರು? ಅವರು(ಬಿಜೆಪಿ) ಅದನ್ನು ಮಾಡಿದ್ದಾರೆಯೇ? ಅವರು ಬಡ್ತಿಯಲ್ಲಿ ಮೀಸಲಾತಿ ನೀಡಿದ್ದಾರೆಯೇ? ಅನ್ನ ಭಾಗ್ಯ ಯೋಜನೆಯನ್ನು ಯಾರು ಜಾರಿ ತಂದರು? ನಾನು ಏನನ್ನೂ ಮಾಡಿಲ್ಲ ಎಂದು ಅವರು ಹೇಗೆ ಹೇಳುತ್ತಾರೆ? ನಾವು ಏನು ಮಾಡಿದ್ದೇವೆ ಎಂದು ಅವರು ಜನರನ್ನು ಕೇಳಬೇಕು" ಎಂದರು.
ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಯಾವುದೇ ದಾಖಲೆಯನ್ನು ಮುರಿಯಲು ನಾನು ರಾಜಕೀಯ ಮಾಡುತ್ತಿಲ್ಲ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದರು. ಅಲ್ಲದೆ, ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು.
Just a day after breaking the record of former Chief Minister Devaraj Urs, who had the longest tenure as Karnataka CM, Chief Minister Siddaramaiah has made a surprising statement about his political future.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm