ಬ್ರೇಕಿಂಗ್ ನ್ಯೂಸ್
13-01-26 10:13 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 13 : ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಾರರು ಕಂಗಲಾಗಿದ್ದಾರೆ.
ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಚಿಕ್ಕಮಗಳೂರು ಕೆಲವು ಭಾಗದಲ್ಲಿ ಮಳೆಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ಗಾಳಿ ಬೀಸಿದ್ದು ವಿಪರೀತ ಚಳಿಯ ವಾತಾವರಣದಿಂದ ಇಲ್ಲಿನ ಜನರು ರೋಸಿ ಹೋಗಿದ್ದಾರೆ.
ವರ್ಷದ ಮೊದಲ ವರ್ಷಧಾರೆಗೆ ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಇದ್ದಕ್ಕಿಂದಂತೆ ಆರಂಭವಾದ ಧಾರಾಕಾರ ಮಳೆಯಿಂದ ಬಾರೀ ನಷ್ಟ ಉಂಟಾಗಿದೆ.

ಈಗಾಗಲೇ ಕಾಫಿ ಮತ್ತು ಅಡಿಕೆ ಕೊಯ್ದು ಆರಂಭವಾಗಿದ್ದು, ಮೋಡ ಕವಿದ ವಾತಾವರಣದಲ್ಲಿ ಅಡಿಕೆ ಮತ್ತು ಕಾಫಿ ಕಾಳು ಒಣಗಿಸುವುದು ದೊಡ್ಡ ಸವಾಲಾಗಿತ್ತು. ಅಕಾಲಿಕ ಮಳೆಯಿಂದ ಬೆಳೆಗಾರರು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಮಳೆಯಿಂದ ಭತ್ತದಕ್ಕೂ ಹಾನಿಯಾಗಿದೆ. ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳು ಮಳೆಗೆ ಗಿಡದಿಂದ ಉದುರುವ ಆತಂಕ ಎದುರಾಗಿದೆ. ಒಟ್ಟಾರೆಯಾಗಿ ವರ್ಷದ ಮೊದಲ ವರ್ಷಧಾರೆ ರೈತರು ಮತ್ತು ಬೆಳೆಗಾರರಲ್ಲಿ ಆತಂಕವನ್ನು ಮೂಡಿಸಿದೆ. ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ.
ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಮೂಡಿಗೆರೆ, ಬಾಳೆಹೊನ್ನೂರು ಹಾಗೂ ಚಿಕ್ಕಮಗಳೂರು ಸುತ್ತಮುತ್ತ ಒಂದು ಗಂಟೆಗಳ ಕಾಲ ಭಾರೀ ಗಾಳಿಯೊಂದಿಗೆ ಮಳೆಯಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೋಡ ಕವಿದ ವಾತಾವರಣದ ನಡುವೆ ಕಾಫಿ ಒಣಗಿಸುವುದೇ ದೊಡ್ಡ ಸವಾಲಾಗಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಈ ಧಾರಾಕಾರ ಮಳೆ ಅನ್ನದಾತರ ಆತಂಕವನ್ನು ಇಮ್ಮಡಿಗೊಳಿಸಿದೆ.
ಅಕಾಲಿಕ ಮಳೆಯ ಹೊಡೆತಕ್ಕೆ ಗಿಡದಲ್ಲೇ ಹಣ್ಣಾಗಿರುವ ಕಾಫಿ ನೆಲಕ್ಕುದುರುತ್ತಿದ್ದರೆ, ಮತ್ತೊಂದೆಡೆ ಕಟಾವಿಗೆ ಬಂದಿರುವ ಭತ್ತದ ಬೆಳೆ ಕೂಡ ನೆಲಕಚ್ಚುವ ಭೀತಿ ಎದುರಾಗಿದೆ.
Heavy unseasonal rainfall in the Malenadu region of Chikkamagaluru district has left coffee growers devastated. Areas including Kalasa, Kudremukh, Horanadu, Sringeri, Mudigere, Balehonnur and parts of Chikkamagaluru witnessed intense rainfall accompanied by strong winds for over an hour, disrupting normal life.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm