ಬ್ರೇಕಿಂಗ್ ನ್ಯೂಸ್
13-01-26 10:13 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 13 : ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಾರರು ಕಂಗಲಾಗಿದ್ದಾರೆ.
ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಚಿಕ್ಕಮಗಳೂರು ಕೆಲವು ಭಾಗದಲ್ಲಿ ಮಳೆಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ಗಾಳಿ ಬೀಸಿದ್ದು ವಿಪರೀತ ಚಳಿಯ ವಾತಾವರಣದಿಂದ ಇಲ್ಲಿನ ಜನರು ರೋಸಿ ಹೋಗಿದ್ದಾರೆ.
ವರ್ಷದ ಮೊದಲ ವರ್ಷಧಾರೆಗೆ ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಇದ್ದಕ್ಕಿಂದಂತೆ ಆರಂಭವಾದ ಧಾರಾಕಾರ ಮಳೆಯಿಂದ ಬಾರೀ ನಷ್ಟ ಉಂಟಾಗಿದೆ.

ಈಗಾಗಲೇ ಕಾಫಿ ಮತ್ತು ಅಡಿಕೆ ಕೊಯ್ದು ಆರಂಭವಾಗಿದ್ದು, ಮೋಡ ಕವಿದ ವಾತಾವರಣದಲ್ಲಿ ಅಡಿಕೆ ಮತ್ತು ಕಾಫಿ ಕಾಳು ಒಣಗಿಸುವುದು ದೊಡ್ಡ ಸವಾಲಾಗಿತ್ತು. ಅಕಾಲಿಕ ಮಳೆಯಿಂದ ಬೆಳೆಗಾರರು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಮಳೆಯಿಂದ ಭತ್ತದಕ್ಕೂ ಹಾನಿಯಾಗಿದೆ. ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳು ಮಳೆಗೆ ಗಿಡದಿಂದ ಉದುರುವ ಆತಂಕ ಎದುರಾಗಿದೆ. ಒಟ್ಟಾರೆಯಾಗಿ ವರ್ಷದ ಮೊದಲ ವರ್ಷಧಾರೆ ರೈತರು ಮತ್ತು ಬೆಳೆಗಾರರಲ್ಲಿ ಆತಂಕವನ್ನು ಮೂಡಿಸಿದೆ. ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ.
ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಮೂಡಿಗೆರೆ, ಬಾಳೆಹೊನ್ನೂರು ಹಾಗೂ ಚಿಕ್ಕಮಗಳೂರು ಸುತ್ತಮುತ್ತ ಒಂದು ಗಂಟೆಗಳ ಕಾಲ ಭಾರೀ ಗಾಳಿಯೊಂದಿಗೆ ಮಳೆಯಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೋಡ ಕವಿದ ವಾತಾವರಣದ ನಡುವೆ ಕಾಫಿ ಒಣಗಿಸುವುದೇ ದೊಡ್ಡ ಸವಾಲಾಗಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಈ ಧಾರಾಕಾರ ಮಳೆ ಅನ್ನದಾತರ ಆತಂಕವನ್ನು ಇಮ್ಮಡಿಗೊಳಿಸಿದೆ.
ಅಕಾಲಿಕ ಮಳೆಯ ಹೊಡೆತಕ್ಕೆ ಗಿಡದಲ್ಲೇ ಹಣ್ಣಾಗಿರುವ ಕಾಫಿ ನೆಲಕ್ಕುದುರುತ್ತಿದ್ದರೆ, ಮತ್ತೊಂದೆಡೆ ಕಟಾವಿಗೆ ಬಂದಿರುವ ಭತ್ತದ ಬೆಳೆ ಕೂಡ ನೆಲಕಚ್ಚುವ ಭೀತಿ ಎದುರಾಗಿದೆ.
Heavy unseasonal rainfall in the Malenadu region of Chikkamagaluru district has left coffee growers devastated. Areas including Kalasa, Kudremukh, Horanadu, Sringeri, Mudigere, Balehonnur and parts of Chikkamagaluru witnessed intense rainfall accompanied by strong winds for over an hour, disrupting normal life.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm