ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ;  ಡಿವೈಡರ್​ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ ಟಿಪ್ಪರ್​​ ಲಾರಿಗೆ ಬೈಕ್ ಡಿಕ್ಕಿ, ಮೂವರು ಯುವಕರ ಬಲಿ, ಪೀಸ್ ಪೀಸ್ ಆದ ವಿದ್ಯಾರ್ಥಿಗಳ ಬಾಡಿ ! 

17-01-26 05:53 pm       HK News Desk   ಕರ್ನಾಟಕ

ಹಿಟ್ ಆ್ಯಂಡ್ ರನ್​ಗೆ ಮೂವರು ಯುವಕರು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದೇವನಹಳ್ಳಿ, ಜ 17 : ಹಿಟ್ ಆ್ಯಂಡ್ ರನ್​ಗೆ ಮೂವರು ಯುವಕರು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಕಾಲೇಜಿನ ಮೂವರು ಯುವಕರು ದುರ್ಮರಣ ಹೊಂದಿದ್ದಾರೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಯುವಕರು ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಬೈಕ್​ ನಿಯಂತ್ರಣ ಕಳೆದುಕೊಂಡು ಡಿವೈಡರ್​ ದಾಟಿ ಬಂದು, ಪಕ್ಕದ ರಸ್ತೆಯಲ್ಲಿ ಎದುರಿನಿಂದ ಬಂದ ಟಿಪ್ಪರ್​​ನಡಿ ಸಿಲುಕಿದೆ. ಅಪಘಾತದ ರಭಸಕ್ಕೆ ಮೂವರು ಯುವಕರ ದೇಹಗಳು ಛಿದ್ರಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಯುವಕರು ಚಿಕ್ಕಜಾಲ ಮೂಲದ ತೌಸಿಫ್​ ಸೇರಿದಂತೆ ಮತ್ತಿಬ್ಬರು ಎಂದು ತಿಳಿದುಬಂದಿದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ತೌಸಿಫ್ ತನ್ನ ಇಬ್ಬರು ಸ್ನೇಹಿತರನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನೆ ನಂತರ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 

ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ:

ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನ ಸ್ಥಳೀಯ ಆಸ್ಪತ್ರೆ ರವಾನೆ ಮಾಡಿದ್ದಾರೆ. ಭೀಕರ ಅಪಘಾತ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

Three college students lost their lives in a gruesome road accident near Agalakote on the Devanahalli–Boodigere Road on January 17. The bike they were riding reportedly lost control, crossed the divider, and collided with an oncoming tipper lorry. The impact was so severe that all three died on the spot.