ಬ್ರೇಕಿಂಗ್ ನ್ಯೂಸ್
19-01-26 08:42 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ವೈರಲ್ ವಿಡಿಯೋ ಬಗ್ಗೆ ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಜಿಪಿ ರಾಮಚಂದ್ರರಾವ್, ''ಈ ಬಗ್ಗೆ ನಮ್ಮ ವಕೀಲರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಇದು ನನಗೂ ಶಾಕಿಂಗ್ ಆಗಿದೆ. ಇದೆಲ್ಲಾ ಫ್ಯಾಬ್ರಿಕೇಟೆಡ್ (ಸೃಷ್ಟಿಸಲ್ಪಟ್ಟಿದ್ದು), ವಿಡಿಯೋ ಎಲ್ಲವೂ ಸುಳ್ಳು'' ಎಂದು ಹೇಳಿದರು.
ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲವೂ ಸುಳ್ಳು. ತನಿಖೆಯಾಗಬೇಕು'' ಎಂದು ಡಿಜಿಪಿ ಪ್ರತಿಕ್ರಿಯೆ ನೀಡಿದ್ದಾರೆ.
ನಿಮಗೆ ಇದರ ಬಗ್ಗೆ ಏನಾದರೂ ಸುಳಿವು ಇತ್ತಾ? ಎಂಬ ಪ್ರಶ್ನೆಗೆ, ''ಇದರ ಬಗ್ಗೆ ನನಗೇನು ಐಡಿಯಾ ಇಲ್ಲ'' ಎಂದ ಅವರು, ''ಯಾವಾಗ ಆಗಿರೋದು ಎಂದು ಗೊತ್ತಿಲ್ಲ. ಆಗಿದ್ದರೆ ಅಲ್ವಾ ಗೊತ್ತಾಗಲಿಕ್ಕೆ'' ಎಂದರು.
ಇದೇ ವೇಳೆ, ''ಗೃಹ ಸಚಿವರನ್ನು ಭೇಟಿಯಾಗಿ ಈ ತರಹದ ಸುಳ್ಳು ಮಾಹಿತಿ ಹಬ್ಬಿಸ್ತಾ ಇದ್ದಾರೆ, ಅದರ ಬಗ್ಗೆ ಅವರ ಹತ್ತಿರ ಮಾತನಾಡಲು ಬಂದೆ ಅಷ್ಟೇ'' ಎಂದರು.
ಇದಕ್ಕೂ ಮುನ್ನ, ಶೇಷಾದ್ರಿ ರಸ್ತೆಯಲ್ಲಿ ಡಿಸಿಆರ್ಇ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದ ರಾಮಚಂದ್ರರಾವ್, ''ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾರೆ. ವೈರಲ್ ಆಗುತ್ತಿರುವುದು ಎಐ ವಿಡಿಯೋ ಆಗಿದೆ'' ಎಂದಷ್ಟೇ ಹೇಳಿ ನಿರ್ಗಮಿಸಿದ್ದರು.
ರಾಮಚಂದ್ರರಾವ್ ಹಾಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್ಇ) ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬರುವ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದಾರೆ. ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾರಾವ್ ಮಲತಂದೆಯಾಗಿರುವ ಅವರನ್ನು, ಆ ಪ್ರಕರಣದ ಸಂಬಂಧ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
Amid controversy over viral videos allegedly showing him with women, Karnataka DGP Ramachandra Rao has denied all allegations, claiming the clips are fabricated and possibly AI-generated. Speaking to the media in Bengaluru, he said unknown persons have conspired to defame him and demanded a thorough investigation.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm