ಬ್ರೇಕಿಂಗ್ ನ್ಯೂಸ್
30-01-26 10:37 pm Bangalore Correspondent ಕರ್ನಾಟಕ
ಬೆಂಗಳೂರು, ಜ.30 : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಹೋದರ ಹಾಗೂ ವೈಟ್ ಗೋಲ್ಡ್ ಕಂಪನಿಯ ಮಾಲೀಕರಾದ ಬಾಬು ಸಿ. ಜೋಸೆಫ್ ಪ್ರತಿಕ್ರಿಯೆ ನೀಡಿದ್ದು ಸಹೋದರನ ಸಾವಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
“ನನಗೆ ತಿಳಿದಿರುವಂತೆ ಕಳೆದ ಮೂರು ದಿನಗಳಿಂದ ಐಟಿ ದಾಳಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಐಟಿ ಅಧಿಕಾರಿ ಕೃಷ್ಣಪ್ರಸಾದ್ ಅವರು ನನ್ನ ಸಹೋದರನ ಮೇಲೆ ಒತ್ತಡ ಹೇರಿದ್ದರು. ತಮ್ಮ ಸಹೋದರನ ಸಾವಿಗೆ ಐಟಿ ಇಲಾಖೆಯ ಅಧಿಕಾರಿಗಳೇ ಹೊಣೆ ಎಂದು ಬಾಬು ಸಿ. ಜೋಸೆಫ್ ಹೇಳಿದ್ದಾರೆ. ವ್ಯಾಪಾರದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಇಂದು ಬೆಳಗ್ಗೆ 11 ಗಂಟೆಗೆ ನನ್ನ ಸಹೋದರ ನನ್ನೊಂದಿಗೆ ಮಾತನಾಡಿದ್ದರು. ಅವರು ಕಚೇರಿಯಲ್ಲೇ ಇದ್ದು, ಯಾವಾಗ ದೆಹಲಿಯಿಂದ ಬರ್ತೀಯಾ ಎಂದು ವಿಚಾರಿಸಿದ್ದರು. ಯಾವುದೇ ಅಸಹಜತೆ ಕಾಣಿಸಲಿಲ್ಲ. ಅವರಿಗೆ ಯಾವುದೇ ಸಾಲವೂ ಇರಲಿಲ್ಲ ಎಂದಿದ್ದಾರೆ.
ಇನ್ಕಮ್ ಟ್ಯಾಕ್ಸ್ ಇಲಾಖೆಯ ಒತ್ತಡದ ಬಗ್ಗೆ ಕಳೆದ ಒಂದು ತಿಂಗಳಿಂದ ತಮ್ಮ ಬಳಿ ಹೇಳಿಕೊಳ್ಳುತ್ತಿದ್ದರು ಎಂದು ಬಾಬು ಸಿ. ಜೋಸೆಫ್ ತಿಳಿಸಿದರು. “ನನ್ನ ಸಹೋದರ ಎಲ್ಲಾ ವಿಚಾರಗಳನ್ನು ನನ್ನ ಬಳಿ ಹೇಳಿಕೊಳ್ಳುತ್ತಿದ್ದರು. ಐಟಿ ಅಧಿಕಾರಿಗಳಿಂದ ಆಗುತ್ತಿರುವ ಒತ್ತಡದ ಬಗ್ಗೆ ಅವರು ನನಗೆ ಹಲವು ಬಾರಿ ಹೇಳಿದ್ದಾರೆ” ಎಂದು ಹೇಳಿದರು.
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಪರಿಶೀಲನೆ ನಡೆಯುತ್ತಿತ್ತು ಎಂದು ಅವರು ತಿಳಿಸಿದ್ದು, “ಐಟಿ ಅಧಿಕಾರಿಗಳು ನನ್ನ ಮನೆಗೂ ಬಂದಿದ್ದರು. ಈ ದೇಶದಲ್ಲಿ ಉದ್ಯಮಿಗಳಿಗೆ ಸರಿಯಾದ ವ್ಯವಸ್ಥೆ ಇಲ್ಲ. ನಾವು ನಿಯಮಿತವಾಗಿ ತೆರಿಗೆ ಪಾವತಿಸುತ್ತಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಐಟಿ ಇಲಾಖೆಯ ಹೆಚ್ಚುವರಿ ಆಯುಕ್ತ ಕೃಷ್ಣಪ್ರಸಾದ್ ಅವರೇ ಸಿ.ಜೆ. ರಾಯ್ ಅವರ ಸಾವಿಗೆ ಹೊಣೆ” ಎಂದಿರುವ ಬಾಬು ಸಿ. ಜೋಸೆಫ್, ತಾವು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವುದಾಗಿ ತಿಳಿಸಿದ್ದಾರೆ. ಜೋಸೆಫ್ ದೂರಿನಂತೆ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a serious allegation following the reported suicide of Confident Group Chairman C.J. Roy, his brother and White Gold company owner Babu C. Joseph claimed that pressure from Income Tax (IT) officials was the primary reason behind Roy’s death.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm