ಬ್ರೇಕಿಂಗ್ ನ್ಯೂಸ್
30-01-26 10:37 pm Bangalore Correspondent ಕರ್ನಾಟಕ
ಬೆಂಗಳೂರು, ಜ.30 : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಹೋದರ ಹಾಗೂ ವೈಟ್ ಗೋಲ್ಡ್ ಕಂಪನಿಯ ಮಾಲೀಕರಾದ ಬಾಬು ಸಿ. ಜೋಸೆಫ್ ಪ್ರತಿಕ್ರಿಯೆ ನೀಡಿದ್ದು ಸಹೋದರನ ಸಾವಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
“ನನಗೆ ತಿಳಿದಿರುವಂತೆ ಕಳೆದ ಮೂರು ದಿನಗಳಿಂದ ಐಟಿ ದಾಳಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಐಟಿ ಅಧಿಕಾರಿ ಕೃಷ್ಣಪ್ರಸಾದ್ ಅವರು ನನ್ನ ಸಹೋದರನ ಮೇಲೆ ಒತ್ತಡ ಹೇರಿದ್ದರು. ತಮ್ಮ ಸಹೋದರನ ಸಾವಿಗೆ ಐಟಿ ಇಲಾಖೆಯ ಅಧಿಕಾರಿಗಳೇ ಹೊಣೆ ಎಂದು ಬಾಬು ಸಿ. ಜೋಸೆಫ್ ಹೇಳಿದ್ದಾರೆ. ವ್ಯಾಪಾರದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಇಂದು ಬೆಳಗ್ಗೆ 11 ಗಂಟೆಗೆ ನನ್ನ ಸಹೋದರ ನನ್ನೊಂದಿಗೆ ಮಾತನಾಡಿದ್ದರು. ಅವರು ಕಚೇರಿಯಲ್ಲೇ ಇದ್ದು, ಯಾವಾಗ ದೆಹಲಿಯಿಂದ ಬರ್ತೀಯಾ ಎಂದು ವಿಚಾರಿಸಿದ್ದರು. ಯಾವುದೇ ಅಸಹಜತೆ ಕಾಣಿಸಲಿಲ್ಲ. ಅವರಿಗೆ ಯಾವುದೇ ಸಾಲವೂ ಇರಲಿಲ್ಲ ಎಂದಿದ್ದಾರೆ.
ಇನ್ಕಮ್ ಟ್ಯಾಕ್ಸ್ ಇಲಾಖೆಯ ಒತ್ತಡದ ಬಗ್ಗೆ ಕಳೆದ ಒಂದು ತಿಂಗಳಿಂದ ತಮ್ಮ ಬಳಿ ಹೇಳಿಕೊಳ್ಳುತ್ತಿದ್ದರು ಎಂದು ಬಾಬು ಸಿ. ಜೋಸೆಫ್ ತಿಳಿಸಿದರು. “ನನ್ನ ಸಹೋದರ ಎಲ್ಲಾ ವಿಚಾರಗಳನ್ನು ನನ್ನ ಬಳಿ ಹೇಳಿಕೊಳ್ಳುತ್ತಿದ್ದರು. ಐಟಿ ಅಧಿಕಾರಿಗಳಿಂದ ಆಗುತ್ತಿರುವ ಒತ್ತಡದ ಬಗ್ಗೆ ಅವರು ನನಗೆ ಹಲವು ಬಾರಿ ಹೇಳಿದ್ದಾರೆ” ಎಂದು ಹೇಳಿದರು.
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಪರಿಶೀಲನೆ ನಡೆಯುತ್ತಿತ್ತು ಎಂದು ಅವರು ತಿಳಿಸಿದ್ದು, “ಐಟಿ ಅಧಿಕಾರಿಗಳು ನನ್ನ ಮನೆಗೂ ಬಂದಿದ್ದರು. ಈ ದೇಶದಲ್ಲಿ ಉದ್ಯಮಿಗಳಿಗೆ ಸರಿಯಾದ ವ್ಯವಸ್ಥೆ ಇಲ್ಲ. ನಾವು ನಿಯಮಿತವಾಗಿ ತೆರಿಗೆ ಪಾವತಿಸುತ್ತಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಐಟಿ ಇಲಾಖೆಯ ಹೆಚ್ಚುವರಿ ಆಯುಕ್ತ ಕೃಷ್ಣಪ್ರಸಾದ್ ಅವರೇ ಸಿ.ಜೆ. ರಾಯ್ ಅವರ ಸಾವಿಗೆ ಹೊಣೆ” ಎಂದಿರುವ ಬಾಬು ಸಿ. ಜೋಸೆಫ್, ತಾವು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವುದಾಗಿ ತಿಳಿಸಿದ್ದಾರೆ. ಜೋಸೆಫ್ ದೂರಿನಂತೆ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a serious allegation following the reported suicide of Confident Group Chairman C.J. Roy, his brother and White Gold company owner Babu C. Joseph claimed that pressure from Income Tax (IT) officials was the primary reason behind Roy’s death.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm