ಬ್ರೇಕಿಂಗ್ ನ್ಯೂಸ್
30-01-26 10:37 pm Bangalore Correspondent ಕರ್ನಾಟಕ
ಬೆಂಗಳೂರು, ಜ.30 : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಹೋದರ ಹಾಗೂ ವೈಟ್ ಗೋಲ್ಡ್ ಕಂಪನಿಯ ಮಾಲೀಕರಾದ ಬಾಬು ಸಿ. ಜೋಸೆಫ್ ಪ್ರತಿಕ್ರಿಯೆ ನೀಡಿದ್ದು ಸಹೋದರನ ಸಾವಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
“ನನಗೆ ತಿಳಿದಿರುವಂತೆ ಕಳೆದ ಮೂರು ದಿನಗಳಿಂದ ಐಟಿ ದಾಳಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಐಟಿ ಅಧಿಕಾರಿ ಕೃಷ್ಣಪ್ರಸಾದ್ ಅವರು ನನ್ನ ಸಹೋದರನ ಮೇಲೆ ಒತ್ತಡ ಹೇರಿದ್ದರು. ತಮ್ಮ ಸಹೋದರನ ಸಾವಿಗೆ ಐಟಿ ಇಲಾಖೆಯ ಅಧಿಕಾರಿಗಳೇ ಹೊಣೆ ಎಂದು ಬಾಬು ಸಿ. ಜೋಸೆಫ್ ಹೇಳಿದ್ದಾರೆ. ವ್ಯಾಪಾರದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಇಂದು ಬೆಳಗ್ಗೆ 11 ಗಂಟೆಗೆ ನನ್ನ ಸಹೋದರ ನನ್ನೊಂದಿಗೆ ಮಾತನಾಡಿದ್ದರು. ಅವರು ಕಚೇರಿಯಲ್ಲೇ ಇದ್ದು, ಯಾವಾಗ ದೆಹಲಿಯಿಂದ ಬರ್ತೀಯಾ ಎಂದು ವಿಚಾರಿಸಿದ್ದರು. ಯಾವುದೇ ಅಸಹಜತೆ ಕಾಣಿಸಲಿಲ್ಲ. ಅವರಿಗೆ ಯಾವುದೇ ಸಾಲವೂ ಇರಲಿಲ್ಲ ಎಂದಿದ್ದಾರೆ.
ಇನ್ಕಮ್ ಟ್ಯಾಕ್ಸ್ ಇಲಾಖೆಯ ಒತ್ತಡದ ಬಗ್ಗೆ ಕಳೆದ ಒಂದು ತಿಂಗಳಿಂದ ತಮ್ಮ ಬಳಿ ಹೇಳಿಕೊಳ್ಳುತ್ತಿದ್ದರು ಎಂದು ಬಾಬು ಸಿ. ಜೋಸೆಫ್ ತಿಳಿಸಿದರು. “ನನ್ನ ಸಹೋದರ ಎಲ್ಲಾ ವಿಚಾರಗಳನ್ನು ನನ್ನ ಬಳಿ ಹೇಳಿಕೊಳ್ಳುತ್ತಿದ್ದರು. ಐಟಿ ಅಧಿಕಾರಿಗಳಿಂದ ಆಗುತ್ತಿರುವ ಒತ್ತಡದ ಬಗ್ಗೆ ಅವರು ನನಗೆ ಹಲವು ಬಾರಿ ಹೇಳಿದ್ದಾರೆ” ಎಂದು ಹೇಳಿದರು.
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಪರಿಶೀಲನೆ ನಡೆಯುತ್ತಿತ್ತು ಎಂದು ಅವರು ತಿಳಿಸಿದ್ದು, “ಐಟಿ ಅಧಿಕಾರಿಗಳು ನನ್ನ ಮನೆಗೂ ಬಂದಿದ್ದರು. ಈ ದೇಶದಲ್ಲಿ ಉದ್ಯಮಿಗಳಿಗೆ ಸರಿಯಾದ ವ್ಯವಸ್ಥೆ ಇಲ್ಲ. ನಾವು ನಿಯಮಿತವಾಗಿ ತೆರಿಗೆ ಪಾವತಿಸುತ್ತಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಐಟಿ ಇಲಾಖೆಯ ಹೆಚ್ಚುವರಿ ಆಯುಕ್ತ ಕೃಷ್ಣಪ್ರಸಾದ್ ಅವರೇ ಸಿ.ಜೆ. ರಾಯ್ ಅವರ ಸಾವಿಗೆ ಹೊಣೆ” ಎಂದಿರುವ ಬಾಬು ಸಿ. ಜೋಸೆಫ್, ತಾವು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವುದಾಗಿ ತಿಳಿಸಿದ್ದಾರೆ. ಜೋಸೆಫ್ ದೂರಿನಂತೆ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a serious allegation following the reported suicide of Confident Group Chairman C.J. Roy, his brother and White Gold company owner Babu C. Joseph claimed that pressure from Income Tax (IT) officials was the primary reason behind Roy’s death.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm