ಬ್ರೇಕಿಂಗ್ ನ್ಯೂಸ್
02-02-26 12:18 pm HK News Desk ಕರ್ನಾಟಕ
ಬಾಗಲಕೋಟೆ, ಫೆ.2 : ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ತಾಯಿ ತನ್ನ ಮೂವರು ಮಕ್ಕಳನ್ನು ನೇಣಿಗೆ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ರೂಪಾ ಎಂಬ ಮಹಿಳೆ ಗಂಡ ಮತ್ತು ಅತ್ತೆ ಮೇಲಿನ ಕೋಪದಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಮೃತ ಮಕ್ಕಳನ್ನು ಸಮೃದ್ಧಿ (5), ಪ್ರೀತಮ್ (4) ಮತ್ತು ಸುಕ್ಷಿತ್ (2) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ರೂಪಾ ಮೊದಲು ಮನೆಯ ಒಳಗಡೆ ಮೂವರು ಮಕ್ಕಳನ್ನು ನೇಣಿಗೆ ಹಾಕಿ ಕೊಂದಿದ್ದು ಬಳಿಕ ತಾನು ಡೀಸೆಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಭೀರ ಸ್ಥಿತಿಯಲ್ಲಿರುವ ರೂಪಾರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೂಪಾ 2018ರಲ್ಲಿ ಹನಮಂತ ಎಂಬುವರೊಂದಿಗೆ ವಿವಾಹವಾಗಿದ್ದು, ದಂಪತಿಗೆ ಮೂರು ಮಕ್ಕಳಿದ್ದರು. ಅತ್ತೆ ರೇಣವ್ವರಿಂದ ನಿರಂತರ ಕಿರುಕುಳ ಎದುರಾಗುತ್ತಿತ್ತು ಎಂಬ ಆರೋಪಗಳಿದ್ದವು. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾದ ರೂಪಾ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಬಾದಾಮಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಾಗಲಕೋಟ ಎಸ್ಪಿ ಸಿದ್ದಾರ್ಥ ಗೋಯೆಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ. ತಾಯಿಯೇ ತನ್ನ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಮಾಹಿತಿ ಇದೆ. ಮಕ್ಕಳು ಮೃತಪಟ್ಟಿದ್ದು, ತಾಯಿ ಗಂಭೀರ ಸ್ಥಿತಿಯಲ್ಲಿದ್ದಾಳೆ. ಗಂಡ–ಹೆಂಡತಿ ಕಲಹ ಮತ್ತು ಅತ್ತೆ–ಮಾವರಿಂದ ಕಿರುಕುಳ ಇದ್ದ ಬಗ್ಗೆ ಪ್ರಾಥಮಿಕ ಮಾಹಿತಿ ಇದೆ. ಮಹಿಳೆ ಆರೋಗ್ಯ ಸುಧಾರಿಸಿದ ಬಳಿಕ ಹೇಳಿಕೆ ಪಡೆಯಲಾಗುವುದು. ತನಿಖೆಯ ನಂತರವೇ ನಿಖರ ಕಾರಣ ತಿಳಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
In a tragic incident at Hiremuchalagudda village in Badami taluk, a woman allegedly hanged her three young children before attempting suicide by consuming diesel. The deceased children have been identified as Samruddhi (5), Preetham (4), and Suksith (2). The mother, Roopa, is undergoing treatment at a private hospital in critical condition.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm