ಬ್ರೇಕಿಂಗ್ ನ್ಯೂಸ್
02-02-26 03:02 pm HK News Desk ಕರ್ನಾಟಕ
ತುಮಕೂರು, ಫೆ.2 : ಸಿನಿಮಾ ಕಥೆಯಂತಿರುವ ನೈಜ ಘಟನೆಯೊಂದು ತುಮಕೂರು ನಗರದಲ್ಲಿ ನಡೆದಿದೆ. ಶ್ರೀಮಂತ ಉದ್ಯಮಿಯೊಬ್ಬರ ಮಗಳು, ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಮನೆಯ ಪಾರ್ಟ್ ಟೈಂ ವಾಹನ ಚಾಲಕನೊಂದಿಗೆ ಓಡಿಹೋಗಿ ಮದುವೆಯಾಗಿರುವ ಘಟನೆ ಕುಟುಂಬವನ್ನೇ ಬೆಚ್ಚಿಬೀಳಿಸಿದೆ.
ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ನಗರದ ಉದ್ಯಮಿಯೊಬ್ಬರ ಮಗಳಿಗೆ ಅವರದೇ ಮನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ರವೀಶ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈ ವಿಚಾರ ಕುಟುಂಬದವರಿಗೆ ತಿಳಿದು ಎಚ್ಚರಿಕೆ ನೀಡಲಾಗಿತ್ತು. ಈ ನಡುವೆ ಕುಟುಂಬದವರು ಹಿಂದಿನಿಂದ ನಿಶ್ಚಯಿಸಿದ್ದಂತೆ, ಯುವತಿಯ ಮಾವನ ಮಗನೊಂದಿಗೆ ಮದುವೆ ನಿಶ್ಚಯಿಸಿ, ನಿಶ್ಚಿತಾರ್ಥ ಮುಗಿಸಿದ್ದರು. ಮದುವೆ ಆಹ್ವಾನ ಪತ್ರಿಕೆ ಹಂಚಿಕೆ, ಹಾಲ್ ಬುಕ್ಕಿಂಗ್, ಊಟ ಹಾಗೂ ಅಲಂಕಾರ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ.
ಆದರೆ ಮದುವೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ, ಜನವರಿ 19ರಂದು ಯುವತಿ ಮನೆ ಬಿಟ್ಟು ರವೀಶನೊಂದಿಗೆ ಪರಾರಿಯಾಗಿದ್ದಾಳೆ. ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಮದುವೆಯಾಗಿರುವುದು ನಂತರ ಬೆಳಕಿಗೆ ಬಂದಿದೆ. ಮಗಳು ಕಾಣೆಯಾಗಿರುವ ಹಿನ್ನೆಲೆ ಕುಟುಂಬಸ್ಥರು ತುಮಕೂರು ನಗರ ಠಾಣೆಗೆ ದೂರು ನೀಡಿದ್ದರು. ಈ ವೇಳೆ, ಯುವತಿಯೇ ಪೊಲೀಸರ ಮುಂದೆ ಹಾಜರಾಗಿ, “ಕುಟುಂಬದವರಿಂದ ಬೆದರಿಕೆ ಇದೆ. ನನಗೆ ರಕ್ಷಣೆ ಬೇಕು” ಎಂದು ಕೇಳಿಕೊಂಡಿದ್ದಾಳೆ.
ಯುವತಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಕೆಯ ಸಹೋದರ, “ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ನಿಶ್ಚಯಿಸಿಲ್ಲ. ಅವಳ ಒಪ್ಪಿಗೆಯೊಂದಿಗೆ ಚಿನ್ನಾಭರಣ, ಸೀರೆ ಖರೀದಿ ಹಾಗೂ ಮದುವೆ ಕಾರ್ಡ್ ಮುದ್ರಣ ಮಾಡಲಾಗಿತ್ತು. ತಾಯಿಯ ಆರೋಗ್ಯ ಸಮಸ್ಯೆಯ ನಡುವೆಯೂ ಮದುವೆ ಸಿದ್ಧತೆಗಾಗಿ ಓಡಾಡುತ್ತಿದ್ದೆವು. ಮದುವೆ ಇಷ್ಟವಿಲ್ಲ ಎಂದು ಹೇಳಬಹುದಿತ್ತು. ಈ ರೀತಿಯ ನಡೆ ನಮಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.
ಯುವತಿ ಕಾಣೆಯಾದ ಕುರಿತು ಪ್ರಕರಣ ದಾಖಲಾದ ಬಳಿಕ, ಪ್ರೇಮಿಗಳು ಮದುವೆಯಾಗಿರುವುದು ದೃಢಪಟ್ಟಿದೆ. ಕುಟುಂಬಸ್ಥರಿಂದ ಬೆದರಿಕೆ ಆರೋಪ ಇರುವ ಹಿನ್ನೆಲೆಯಲ್ಲಿ, ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಎರಡೂ ಕಡೆಯ ಕುಟುಂಬಗಳು ಒಪ್ಪಿಗೆ ಸೂಚಿಸಿ, ಖುಲಾಸೆ ಪತ್ರಗಳಿಗೆ ಸಹಿ ಹಾಕಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a real-life story resembling a film plot, a wealthy businessman’s daughter eloped with her part-time family driver just a month before her wedding. Despite being engaged to her cousin and with all wedding preparations completed, the woman reportedly left home on January 19 and married the driver, Ravish, in Chikkanayakanahalli.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm