ಬ್ರೇಕಿಂಗ್ ನ್ಯೂಸ್
02-02-26 08:14 pm HK News Desk ಕರ್ನಾಟಕ
ಮಂಜೇಶ್ವರ, ಫೆ.2 : ಆಸ್ತಿ ವಿಚಾರದಲ್ಲಿ ಸೋದರ ಸಂಬಂಧಿಯ ಜೊತೆಗೆ ಜಗಳ ಕಾದ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಕೊಲೆಗೈದ ಘಟನೆ ಕರ್ನಾಟಕ ಗಡಿಭಾಗ ತಲಪಾಡಿ ಬಳಿಯ ತುಮ್ಮಿನಾಡಿನಲ್ಲಿ ನಡೆದಿದೆ. ಇಬ್ಬರ ಜಗಳ ಬಿಡಿಸಲು ಹೋದ 16 ವರ್ಷದ ಮಗಳು ದುರಂತ ಬಲಿಯಾಗಿದ್ದಾಳೆ.
ಮಂಜೇಶ್ವರದ ತುಮ್ಮಿನಾಡು ನಿವಾಸಿ, ಪ್ಲಸ್ ಒನ್ ವಿದ್ಯಾರ್ಥಿನಿ ಜಮೀಲಾ(16) ಮೃತಪಟ್ಟ ದುರ್ದೈವಿ. ಉಮರ್ ಪಾಷ ಕೊಲೆಗೈದ ವ್ಯಕ್ತಿಯಾಗಿದ್ದು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಮರ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಪತ್ನಿಯ ಸೋದರಿಯ ಮನೆಯಲ್ಲಿ ವಾಸವಿದ್ದ. ಸೋಮವಾರ ಸಂಜೆ 5:30ರ ಹೊತ್ತಿಗೆ, ಉಮರ್ ಮತ್ತು ಆತನ ಬಾವ (ಪತ್ನಿಯ ಸೋದರಿಯ ಪತಿ) ಶೇಕುಂಞ ಎಂಬವರ ನಡುವೆ ಆಸ್ತಿ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಉಮರ್ ಹರಿತ ಆಯುಧದಿಂದ ಶೇಖುಞ್ಞ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ.

ಈ ವೇಳೆ ತನ್ನ ಮಾವನನ್ನು ರಕ್ಷಿಸಲು ಜಮೀಲಾ ಮಧ್ಯ ಪ್ರವೇಶಿಸಿದ್ದಾಳೆ. ಆದರೆ ಉಮರ್ ಕೈಯಲ್ಲಿದ್ದ ಹರಿತ ಆಯುಧದ ಪೆಟ್ಟು ಜುಮೀಲಾ ಕುತ್ತಿಗೆಯ ಭಾಗಕ್ಕೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಶೇಖುಂಜ್ ಅವರಿಗೂ ಗಾಯಗಳಾಗಿವೆ.
ಮೃತ ಜಮೀಲಾ ಉಮರ್ ದಂಪತಿಯ ಏಕೈಕ ಪುತ್ರಿಯಾಗಿದ್ದಳು. ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಉಮರ್, ಇತ್ತೀಚೆಗೆ ಗಾಂಜಾ ಸೇರಿದಂತೆ ಮಾದಕ ದ್ರವ್ಯಗಳ ವ್ಯಸನಿಯಾಗಿದ್ದ ಎನ್ನಲಾಗಿದೆ. ಮಾದಕ ವಸ್ತುವಿನ ಅಮಲಿನಲ್ಲಿ ಕ್ರೂರ ಕೃತ್ಯ ನಡೆಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದು ಆರೋಪಿ ಉಮರ್ನನ್ನು ವಶಕ್ಕೆ ಪಡೆದಿದ್ದಾರೆ.
A 16-year-old girl died after she was accidentally struck by her father during a violent clash over a property dispute in Manjeshwar near the Karnataka border. The father, who allegedly attacked his brother-in-law with a sharp weapon, has been taken into custody.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm