ಬ್ರೇಕಿಂಗ್ ನ್ಯೂಸ್
05-02-26 05:52 pm HK News Desk ಕರ್ನಾಟಕ
ಶಿವಮೊಗ್ಗ, ಫೆ.05 : ನಿತ್ಯ ಬೆಳಗ್ಗೆ ಭವಿಷ್ಯ ಹೇಳುತ್ತಿದ್ದವನ ನಿಜ ಜೀವನದ ಕರ್ಮಕಾಂಡ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರಿಗೆ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್ ಎಂಬಾತ, ರೀಲ್ಸ್ ರಾಣಿ ಸುಚಿತ್ರಾ ಹಿಂದೆ ನಾಯಿ ತರ ಸುತ್ತಾಡಿದ್ದೇನೆ ಎಂದು ತಾನೇ ಒಪ್ಪಿಕೊಂಡಿರುವ ಆಡಿಯೋ ಇದೀಗ ವೈರಲ್ ಆಗಿದೆ.
ಈ ಮಾತುಗಳನ್ನು ಸ್ವತಃ ಕಮಲಾಕರ್ ಭಟ್ ಮಾತನಾಡಿರುವುದಾಗಿ ಹೇಳಲಾಗುತ್ತಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿಯೋದಲ್ಲಿ, “ಇವಳೇ ನನ್ನ ಸರ್ವಸ್ವ. ಅವಳನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಅವಳು ಏನು ಮಾಡಿದ್ರು ಕೂಡ ನಾಯಿ ತರ ಅವಳ ಹಿಂದೆ ಓಡಾಡಿದವನು ನಾನು” ಎಂದು ಕಮಲಾಕರ್ ಭಟ್ ಹೇಳಿರುವುದು ಕೇಳಿಸುತ್ತದೆ.

ಇನ್ನೂ ಅದೇ ಆಡಿಯೋದಲ್ಲಿ ನಾಲ್ಕು ತಿಂಗಳ ಪರಿಶ್ರಮದ ನಂತರ ದೇವರು ಕೊಟ್ಟ ಫಲ ಎಂದು ಸುಚಿತ್ರಾಳನ್ನು ಪಡೆದಂತಾಗಿ ಮಾತನಾಡಿದ್ದಾನೆ. ಇದೇ ಆಡಿಯೋದಲ್ಲಿ ರೀಲ್ಸ್ ರಾಣಿ ಸುಚಿತ್ರಾ, “ಅವನಿಗೆ ಹೆಂಡತಿಯೂ ನಾನೇ, ಲವರೂ ನಾನೇ” ಎಂದು ಹೇಳಿರುವ ಭಾಗವೂ ಇದೆ. ಇದಾದ ಬಳಿಕ ಸುಚಿತ್ರಾ ತನ್ನ ಇನ್ಸ್ಟಾಗ್ರಾಮ್ ಬಯೋದಲ್ಲಿ “ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ” ಎಂದು ಬದಲಿಸಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ. ಸುಚಿತ್ರಾ ಇನ್ಸ್ಟಾಗ್ರಾಮ್ನಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾಳೆ ಎನ್ನಲಾಗಿದ್ದು, ಪ್ರೀತಿ ಹೆಸರಲ್ಲಿ ದುಡ್ಡು ಮಾಡುತ್ತಿದ್ದಳಾ? ಅಥವಾ ದುಡ್ಡಿಗಾಗಿ ಪ್ರೀತಿಯ ನಾಟಕವಾಡಿದಳಾ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ.
ಭವಿಷ್ಯ ಹೇಳುತ್ತಿದ್ದ ವ್ಯಕ್ತಿಯೊಬ್ಬನ ಈ ರೀತಿಯ ವೈಯಕ್ತಿಕ ಆಡಿಯೋ ಬಹಿರಂಗವಾಗಿರುವುದು ಜ್ಯೋತಿಷ್ಯ ವೃತ್ತಿಯ ನೈತಿಕತೆ ಮೇಲೆಯೂ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
An alleged audio clip of astrologer Kamalakar Bhat has gone viral on social media, triggering widespread debate. In the clip, he is purportedly heard admitting that he followed a woman social media influencer, popularly known as “Reels Rani” Suchitra, obsessively in order to win her over.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm