ಬ್ರೇಕಿಂಗ್ ನ್ಯೂಸ್
06-02-26 12:30 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 06 : ಖಾಸಗಿ ಬಸ್ವೊಂದು ಅಪಘಾತಕ್ಕೀಡಾಗಿ, ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ತುಮಕೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗಿನ ಜಾವ 02.40 ಗಂಟೆ ಸುಮಾರಿಗೆ ಸಂಭವಿಸಿದೆ. ಬೆಂಗಳೂರಿನಿಂದ ಯಾದಗಿರಿ ತೆರಳುತ್ತಿದ್ದ ಸಂಜನಾ ಟ್ರಾವೆಲ್ಸ್ನ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬೆಂಕಿಗೆ ಆಹುತಿಯಾಗಿದೆ.
ರಸ್ತೆಯಲ್ಲಿ ಕಾಮಗಾರಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ, ನಿಧಾನವಾಗಿ ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡ್ರ್ ಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಬಸ್ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ, ಪ್ರಯಾಣಿಕರನ್ನು ತಕ್ಷಣ ಬಸ್ನಿಂದ ಕೆಳಗಿಳಿಸಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ನಾಶವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಪರಿಣಾಮ ಲಗೇಜ್ ಬಾಕ್ಸ್ನಲ್ಲಿದ್ದ ಪ್ರಯಾಣಿಕರ ವಸ್ತುಗಳೂ ಸುಟ್ಟು ಕರಕಲಾಗಿವೆ.
A major tragedy was averted after a private sleeper bus caught fire on National Highway 48 (Tumakuru–Bengaluru stretch) in the early hours of Thursday around 2:40 AM. The incident occurred near Hanumanthapura Gate in Nelamangala taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm