ಬ್ರೇಕಿಂಗ್ ನ್ಯೂಸ್
07-02-26 05:09 pm HK News Desk ಕರ್ನಾಟಕ
ಗದಗ, ಫೆ.7: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳ ಓದಿಗೆ ಅನುವಾಗುವಂತೆ ಗದಗ ಜಿಲ್ಲೆಯ ರೋಣ ಮತ್ತು ಗಜೇಂದ್ರಗಡ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಮೊಬೈಲ್ ಫೋನ್ ಮತ್ತು ಟಿವಿಗಳನ್ನು ಸ್ವಿಚ್ ಆಫ್ ಮಾಡುವಂತೆ ಹಾಗೂ ಟ್ರ್ಯಾಕ್ಟರ್ಗಳಲ್ಲಿ ಜೋರಾಗಿ ಸಂಗೀತ ಹಾಕಿಕೊಂಡು ಸಂಚರಿಸುವುದನ್ನು ನಿಷೇಧಿಸಿ ತಾಲೂಕು ಪಂಚಾಯಿತಿ ಆದೇಶ ಹೊರಡಿಸಿದೆ. ಈ ಕುರಿತು ಡಂಗುರ ಸಾರುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಂತ ಅಧ್ಯಯನ ವಾತಾವರಣ ಒದಗಿಸಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಸುಧಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ರೋಣ ಹಾಗೂ ಗಜೇಂದ್ರಗಡ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ತಕ್ಷಣವೇ ಡಂಗೂರ ಸಾರಿಸಿ ಆದೇಶವನ್ನು ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ ಸಮಯದಲ್ಲಿ ಮೊಬೈಲ್ ಬಳಕೆ, ಟಿವಿ ವೀಕ್ಷಣೆ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಓದಿಗೆ ಅಡ್ಡಿಯಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ತಾಲೂಕು ಪಂಚಾಯಿತಿ ಮನವಿ ಮಾಡಿದೆ.
ಈ ಕ್ರಮಕ್ಕೆ ಗ್ರಾಮಸ್ಥರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. “ಇಂದಿನ ಮಕ್ಕಳಿಗೆ ಓದಲು ಸಮಯ ನೀಡುವುದು ಅತ್ಯಂತ ಮುಖ್ಯ. ಸಂಜೆ ವೇಳೆ ಟಿವಿ, ಮೊಬೈಲ್ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಗಮನ ಬೇರೆಡೆ ಹರಿಯುತ್ತಿತ್ತು. ಸರ್ಕಾರ ಹಾಗೂ ತಾಲೂಕು ಪಂಚಾಯಿತಿ ತೆಗೆದುಕೊಂಡಿರುವ ಈ ನಿರ್ಧಾರ ಅತ್ಯಂತ ಉತ್ತಮ. ನಾವು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುತ್ತೇವೆ” ಎಂದು ಗ್ರಾಮಸ್ಥ ಶಿವಾನಂದ ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm