ಬ್ರೇಕಿಂಗ್ ನ್ಯೂಸ್
13-02-26 10:45 pm HK News Desk ಕರ್ನಾಟಕ
ಬೆಂಗಳೂರು, ಫೆ.13: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ದನ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಏಕಕಾಲದಲ್ಲಿ 6 ಕಡೆ ದಾಳಿ ನಡೆಸಿ ಸುಮಾರು 23 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.
ಜನಾರ್ದನ್ ಅವರ ಆಪ್ತ ಸುಜಯ್ ಶೆಟ್ಟಿ ಎಂಬವರಿಗೆ ಸೇರಿದ ಫ್ಲಾಟ್ನಲ್ಲಿ ಅಧಿಕಾರಿಗಳು ಶೋಧ ನಡೆಸಿದಾಗ, ಬರೋಬ್ಬರಿ 1.70 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಈ ಹಣವು ಎಂಜಿನಿಯರ್ ಜನಾರ್ದನ್ ಅವರಿಗೆ ಸೇರಿದ್ದಾ ಎಂಬ ನಿಟ್ಟಿನಲ್ಲಿ ತನಿಖೆ ಸಾಗಿದೆ. ಜನಾರ್ದನ್ ಅವರಿಗೆ ಸೇರಿದ ಮನೆ, ಕಚೇರಿ ಸೇರಿದಂತೆ ಒಟ್ಟು 6 ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಇದರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.


ಇದೇ ವೇಳೆ ಲೋಕೋಪಯೋಗಿ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಇಂಜಿನಿಯರ್ಗಳು ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ನಡೆದ ದಾಳಿಯಾಗಿದ್ದು 23 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಜನಾರ್ಧನ ಅವರ ಬಳಿ 1 ನಿವೇಶನ, 3 ಮನೆಗಳು, 34 ಎಕರೆ ಕೃಷಿ ಜಮೀನು, ₹1.70 ಕೋಟಿ ನಗದು, ₹7.08 ಲಕ್ಷದ ಚಿನ್ನಾಭರಣ, ₹20 ಲಕ್ಷದ ವಾಹನಗಳು, ₹60 ಲಕ್ಷ ಮೌಲ್ಯದ ಇತರೆ ವಸ್ತುಗಳು ಒಟ್ಟು ₹4.42 ಕೋಟಿ ಮೌಲ್ಯದ ಆಸ್ತಿ ವಶಪಡಿಸಿದ್ದಾರೆ.
ಪುರುಷೋತ್ತಮ ದಾಸ್ ಹೆಗಡೆ – ₹11.29 ಕೋಟಿ
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪುರುಷೋತ್ತಮ ದಾಸ್ ಹೆಗಡೆ ಅವರಿಗೆ ಸೇರಿದ 14 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.
ಪತ್ತೆಯಾದ ಆಸ್ತಿ:
ಒಟ್ಟು ಆಸ್ತಿ: ₹11.29 ಕೋಟಿ (ಅಂದಾಜು)
ಅರ್ಜುನ್ ಆರ್.ಎಚ್ (BESCOM) – ₹2.18 ಕೋಟಿ
• 2 ನಿವೇಶನ, 3 ಮನೆಗಳು
• 2 ಎಕರೆ 20 ಗುಂಟೆ ಜಮೀನು
• ಚಿನ್ನಾಭರಣ, ವಾಹನಗಳು, ಇತರೆ ವಸ್ತುಗಳು
ಒಟ್ಟು ಅಸಮತೋಲನ ಆಸ್ತಿ: ₹2.18 ಕೋಟಿ
ಸೋಮಲಿಂಗಪ್ಪ ಸಿದ್ದನಗೌಡರ್ – ₹1.82 ಕೋಟಿ
ಒಟ್ಟು ಅಸಮತೋಲನ ಆಸ್ತಿ: ₹1.82 ಕೋಟಿ
ಪ್ರಕರಣದ ತನಿಖೆ ಮುಂದುವರಿದಿದ್ದು, ಪತ್ತೆಯಾದ ನಗದು ಹಾಗೂ ಆಸ್ತಿಗಳ ಮೂಲದ ಬಗ್ಗೆ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
In a major anti-corruption operation, officials of the Karnataka Lokayukta have unearthed disproportionate assets worth over ₹23 crore during raids conducted against H.M. Janardhan, Superintendent Engineer of the Karnataka Residential Educational Institutions Society (KREIS), on charges of amassing wealth beyond known sources of income.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm