ಬ್ರೇಕಿಂಗ್ ನ್ಯೂಸ್
20-02-26 09:20 pm HK News Desk ಕರ್ನಾಟಕ
ಹಾಸನ,ಫೆ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ ದೇವಸ್ಥಾನ ಉತ್ಸವ ಈ ಬಾರಿ ಭ್ರಷ್ಟಾಚಾರದ ಆರೋಪಗಳಿಂದ ಸುದ್ದಿಯಲ್ಲಿದೆ. ಕಳೆದ ವರ್ಷ ಲಕ್ಷಾಂತರ ಭಕ್ತರು ಹರಿದುಬಂದಿದ್ದ ಉತ್ಸವದ ವಿದ್ಯುತ್ ದೀಪಾಲಂಕಾರ ಟೆಂಡರ್ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆರ್ಟಿಐ ಕಾರ್ಯಕರ್ತ ಮನು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ತನಿಖೆ ನಡೆಸಿದರು. ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ದೂರುದಾರ ಮನು ಸಮ್ಮುಖದಲ್ಲೇ ಮಹಾನಗರ ಪಾಲಿಕೆ ಇಂಜಿನಿಯರ್ ಸುಜಾತಾ ಹಾಗೂ ನಿವೃತ್ತ ಇಂಜಿನಿಯರ್ ರಂಗಸ್ವಾಮಿ ಅವರನ್ನು ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ಕಲೆಹಾಕಿದರು.
ಮುಜರಾಯಿ ಇಲಾಖೆಯ ಗ್ರೇಡ್-ಒನ್ ದೇವಾಲಯವಾಗಿರುವ ಹಾಸನಾಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಒಬ್ಬನೇ ಗುತ್ತಿಗೆದಾರನಿಗೆ ದೀಪಾಲಂಕಾರ ಟೆಂಡರ್ ನೀಡಲಾಗುತ್ತಿದೆ ಎಂಬ ಆರೋಪ ಇದೆ. ವಿದ್ಯುತ್ ದೀಪಾಲಂಕಾರಕ್ಕೆ ಹಲವು ಗುತ್ತಿಗೆದಾರರು ಅರ್ಜಿ ಸಲ್ಲಿಸಿದ್ದರೂ, ನಿಯಮ ಪಾಲನೆ ಮಾಡದೆ ಒಬ್ಬರಿಗೇ ಅನುಕೂಲ ಮಾಡಿಕೊಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೀಪಾಲಂಕಾರದಲ್ಲೇ 15 ಲಕ್ಷಕ್ಕೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಾಸನಾಂಬೆ ಉತ್ಸವದಲ್ಲಿ ಅನುಭವ ಹೊಂದಿದವರಿಗೆ ಮಾತ್ರ ಆದ್ಯತೆ ಎನ್ನುವ ಷರತ್ತು ಸೇರಿಸಿ, ಲೈಟಿಂಗ್ ಹಾಗೂ ಹೂವಿನ ಅಲಂಕಾರ ಸೇರಿದಂತೆ ಎಲ್ಲಾ ಕಾಮಗಾರಿಗೂ ಒಂದೇ ವ್ಯಕ್ತಿಗೆ ಗುತ್ತಿಗೆ ನೀಡಲಾಗಿದೆ. “ಖರೀದಿ ಮಾಡಿದರೆ ಇಷ್ಟೊಂದು ವೆಚ್ಚ ಆಗುವುದಿಲ್ಲ, ದುಂದು ವೆಚ್ಚ ಮಾಡಲಾಗಿದೆ” ಎಂದು ದೂರುದಾರ ಆರೋಪಿಸಿದ್ದಾರೆ.
ತನಿಖೆ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿ, ಸರಿಯಾದ ದಾಖಲೆ ನೀಡದಿದ್ದರೆ ವರದಿಯಲ್ಲಿ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಾ ಅಧಿಕಾರಿಗಳ ಪ್ರಶ್ನೆಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಭಕ್ತರ ನಂಬಿಕೆಗೆ ಧಕ್ಕೆ ತರುವ ರೀತಿಯಲ್ಲಿ ಹಣ ದುರ್ಬಳಕೆ ನಡೆದಿದೆಯೇ ಎಂಬ ಪ್ರಶ್ನೆ ಈಗ ಜನಮನದಲ್ಲಿ ಮೂಡಿದ್ದು, ಲೋಕಾಯುಕ್ತ ತನಿಖೆ ಮುಂದಿನ ಹಂತದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm