ಬ್ರೇಕಿಂಗ್ ನ್ಯೂಸ್
24-02-26 03:51 pm HK News Staffer ಕರ್ನಾಟಕ
ಬೆಂಗಳೂರು, ಫೆ.23: ರಾಜ್ಯದ ಮಾರುಕಟ್ಟೆಗೆ ಬರುವ ಬಹುತೇಕ ತರಕಾರಿಗಳಲ್ಲಿ ಸೀಸ ಮತ್ತು ಇನ್ನಿತರ ಮಾರಕ ರಾಸಾಯನಿಕ ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಅತಿಯಾದ ಸೀಸದ ಪ್ರಮಾಣ ಇರುವುದು ಪತ್ತೆಯಾಗಿದೆ.
ಕೆಲವು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ ಎಂದು ಅಧ್ಯಯನ ವರದಿ ಪ್ರಕಟವಾಗಿತ್ತು. 2023ರ ಅಕ್ಟೋಬರ್ 25ರಂದು ಇಎಂಪಿಇ ಸಂಸ್ಥೆ 400 ಮಾದರಿಗಳ ಪರಿಶೀಲನೆ ನಡೆಸಿ, ಸೀಸ ಸೇರಿದಂತೆ ಭಾರೀ ಲೋಹಗಳು ಮಣ್ಣಿನಲ್ಲೇ ಅಸ್ತಿತ್ವವಿದೆ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, CPCBಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಆದರೀಗ ಮತ್ತೊಮ್ಮೆ ಮಾಡಿದ ಅಧ್ಯಯನದಿಂದ ರಾಜ್ಯದ ವಿವಿಧ ಭಾಗದ ತರಕಾರಿಗಳಲ್ಲಿ ಸೀಸದ ಪ್ರಮಾಣ ಹೆಚ್ಚಿರುವುದು ಕಂಡುಬಂದಿದೆ.
ನೆಲಮಂಗಲ, ರಾಜಾಜಿನಗರ, ಕೋಲಾರ ಮಾರುಕಟ್ಟೆಗಳಿಂದ 53 ಮಾದರಿಗಳು ಹಾಗೂ ನೆಲಮಂಗಲ, ಕೋಲಾರ, ಚಿಕ್ಕಬಳ್ಳಾಪುರ ಕೃಷಿ ಕ್ಷೇತ್ರಗಳಿಂದ ಉಳಿದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಸೀಸ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದೆ. ತರಕಾರಿ ಮಾದರಿಗಳಲ್ಲಿ 19 ಮಾದರಿಗಳು ಮಾನದಂಡಕ್ಕಿಂತ ಹೆಚ್ಚು ಸೀಸದ ಅಂಶ ಹೊಂದಿರುವುದು ಪ್ರಯೋಗಾಲಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ.
ಆರ್ಗ್ಯಾನಿಕ್ ಎಂದು ಮಾರಾಟವಾಗಿದ್ದ ಬದನೆಕಾಯಿಯಲ್ಲಿ 1.953 ಮಿ.ಗ್ರಾಂ/ಕೆಜಿ ಸೀಸ ಪತ್ತೆಯಾಗಿದ್ದು, ಇದು ನಿಗದಿತ 0.1 ಮಿ.ಗ್ರಾಂ ಮಿತಿಗಿಂತ 20 ಪಟ್ಟು ಹೆಚ್ಚಾಗಿದೆ. ತೊಂಡೆಕಾಯಿ, ಅವರೆಕಾಯಿ, ಸೊಪ್ಪು, ಕೋಸು ಸೇರಿದಂತೆ ಹಲವು ತರಕಾರಿಗಳಲ್ಲೂ ಮಿತಿಗಿಂತ ಹಲವು ಪಟ್ಟು ಅಧಿಕ ಸೀಸ ಕಂಡುಬಂದಿದೆ. ಸೌತೆಕಾಯಿ, ಹೀರೇಕಾಯಿ, ಕ್ಯಾಪ್ಸಿಕಂ, ಬೀಟ್ರೂಟ್, ಹಾಗಲಕಾಯಿ, ಶಲಗಂ, ಸ್ಕ್ವಾಶ್ ಮತ್ತು ಮೆಣಸಿನಕಾಯಿ ಮಾದರಿಗಳಲ್ಲೂ ಅತಿಯಾದ ರಾಸಾಯನಿಕ ಪತ್ತೆಯಾಗಿದೆ.
ಭಾರೀ ವಿಷಕಾರಿ ಕೀಟನಾಶಕವಾದ ಮೊನೋಕ್ರೋಟೊಫೋಸ್ ಕೂಡ ಪತ್ತೆಯಾಗಿದೆ. ದೇಶದಲ್ಲಿ 2023ರಲ್ಲಿ ಈ ಕೀಟನಾಶಕ ಬಳಕೆಯನ್ನು ನಿಷೇಧಿಸಿದ್ದರೂ ತರಕಾರಿಗಳಲ್ಲಿ ನಿಷೇಧಿತ ರಾಸಾಯನಿಕ ಪತ್ತೆಯಾಗಿದೆ. ಮೆಣಸಿನಕಾಯಿ ಮಾದರಿಗಳಲ್ಲಿ ನಿಗದಿತ 0.2 ಮಿ.ಗ್ರಾಂ/ಕೆಜಿ ಮಿತಿಗಿಂತ ಎರಡು ಪಟ್ಟು ಹೆಚ್ಚು ಮೊನೋಕ್ರೋಟೊಫೋಸ್ ಕಂಡುಬಂದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm