ಬ್ರೇಕಿಂಗ್ ನ್ಯೂಸ್
25-02-26 04:30 pm HK News Staffer ಕರ್ನಾಟಕ
ಬೆಂಗಳೂರು, ಫೆ.25: ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ "ನಮ್ಮ ಮೆಟ್ರೋ" ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ದೂರದ ವರೆಗೆ ಬಿಎಂಆರ್ಸಿಎಲ್ ಬ್ಯಾರಿಕೇಡ್ ಅಳವಡಿಸಿತ್ತು. ಇದೀಗ ಕಾಮಗಾರಿ ಮುಗಿದು ಹಲವು ದಿನಗಳೇ ಕಳೆದಿದ್ದರು ಅವುಗಳನ್ನು ತೆರವು ಮಾಡಿಲ್ಲ. ಇದರಿಂದ ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ನಿತ್ಯ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಆಸರೆ ಸರ್ಕಾರಕ್ಕೆ ಮಾತ್ರ ಈ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಳೇನ ಅಗ್ರಹಾರದಿಂದ ನಾಗವಾರವರೆಗೆ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಪಿಲ್ಲರ್ ಕಾಮಗಾರಿ ಪೂರ್ಣಗೊಂಡು ಹಲವು ತಿಂಗಳು ಕಳೆದಿದ್ದರೂ, ಕಾಮಗಾರಿ ಸ್ಥಳದ ಸುತ್ತ ಅಳವಡಿಸಿರುವ ಬ್ಯಾರಿಕೇಡ್ಗಳನ್ನು ಇನ್ನೂ ತೆಗೆದಿಲ್ಲ. ಇದರಿಂದ ಹೊಸೂರು ರಸ್ತೆ ಹಾಗೂ ಬನ್ನೇರುಘಟ್ಟ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಮೆಟ್ರೋ ಕಾಮಗಾರಿಗಾಗಿ ರಸ್ತೆಗಳಲ್ಲಿ ತೆಗೆದಿದ್ದ ಗುಂಡಿಗಳನ್ನು ಮುಚ್ಚುವ ಕಾರ್ಯವೂ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಸುರಕ್ಷತಾ ಪರೀಕ್ಷೆಗಳು ನಡೆಯುತ್ತಿವೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಈ ಮಾರ್ಗವನ್ನು ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm