ಬ್ರೇಕಿಂಗ್ ನ್ಯೂಸ್
26-02-26 12:58 pm HK News Staffer ಕರ್ನಾಟಕ
ಬೆಂಗಳೂರು, ಫೆ. 26: ಬಡ ಕುಟುಂಬದ ಆಟೋ ಚಾಲಕರೊಬ್ಬರ ಮಗಳು ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್. ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ.
ಆಟೋ ಚಾಲಕನ ಮಗಳಾಗಿ ಬೆಳೆದು, ತಾಯಿ ಜೊತೆಗೆ ಹೂವು ಮಾರುತ್ತಲೇ ಬೆಳೆದ ನಾಗಿಣಿ ಎಂಬ ಹೆಣ್ಮಗಳು ಇಂದು ನ್ಯಾಯ ತೀರ್ಮಾನದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಸ್ಫೂರ್ತಿ.
ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಂಜುಳಾ ಮಾರುಕಟ್ಟೆಯಲ್ಲಿ ಮನೆಗೆಲಸ ಮುಗಿಸಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ಇದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಅಡ್ಡಿ ಬರಲಿಲ್ಲ. ನಾಗಿಣಿ ಕೂಡ ಬಾಲ್ಯದಿಂದಲೇ ತಾಯಿಗೆ ಹೂವಿನ ವ್ಯಾಪಾರದಲ್ಲಿ ನೆರವಾಗುತ್ತಿದ್ದರು. ಇದರ ಜೊತೆಗೇ ಓದನ್ನೂ ಮಾಡಿಕೊಂಡಿದ್ದಳು.
10ನೇ ತರಗತಿಯ ವರೆಗೆ ಸರ್ಕಾರಿ ಕನ್ನಡ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ನಾಗಿಣಿ ತಂದೆ, ತಾಯಿಯ ಪರಿಶ್ರಮಕ್ಕೆ ತಕ್ಕ ಸಾಧನೆ ಮಾಡಿದ್ದಾಳೆ. ಚಿಕ್ಕಂದಿನಿಂದಲೂ ಓದಿನಲ್ಲಿ ಸದಾ ಮುಂದಿದ್ದ ನಾಗಿಣಿ , ಬೆಳಗ್ಗೆ ಅಮ್ಮ ಕಟ್ಟಿ ಕೊಟ್ಟ ಹೂವನ್ನು ಮಾರಾಟ ಮಾಡಿಯೇ ಶಾಲೆಗೆ ಹೋಗುತ್ತಿದ್ದಳು. ವಕೀಲೆಯಾಗಿ ವೃತ್ತಿ ಆರಂಭಿಸಿದ ಬಳಿಕವು ಹಗಲಿರುಳು ಓದಿಗೆ ಶ್ರಮ ಪಡುತ್ತಿದ್ದರು. ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆ ಆಗಿದ್ದಾರೆ. ಮಗಳು ಶ್ರಮಪಟ್ಟಿದ್ದಕ್ಕೆ ಈಗ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವುದು ಖುಷಿಯಾಗಿದೆ ಎಂದು ತಾಯಿ ಮಂಜುಳಾ ಸಂತಸ ಹಂಚಿಕೊಂಡಿದ್ದಾರೆ.
ನಮ್ಮ ಕಷ್ಟ ಅರಿತಿದ್ದ ಮಗಳು ಸಹ ಹಗಲಿರುಳು ಕಷ್ಟಪಟ್ಟು ಓದುತ್ತಿದ್ದಳು. ಇಂದು ಇಡೀ ಊರಿನ ಜನ ಹೆಮ್ಮೆಪಡುವಂತೆ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾಳೆ. ಮಗಳ ಸಾಧನೆ ನನಗೆ ಖುಷಿ ತಂದಿದೆ. ನ್ಯಾಯಾಧೀಶೆಯಾಗಿ ನೊಂದವರಿಗೆ ದನಿಯಾಗಲಿ ಎಂದು ತಂದೆ ಲಕ್ಷ್ಮಣ್ ಶುಭ ಹಾರೈಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm