ಬ್ರೇಕಿಂಗ್ ನ್ಯೂಸ್
27-02-26 10:17 pm HK News Desk ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ಶಾಕ್ ನೀಡಲು ಮುಂದಾಗಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ, ಜಮೀನು ಮತ್ತು ಕಟ್ಟಡಗಳ ಮಾರ್ಗದರ್ಶಿ ಮೌಲ್ಯದಲ್ಲಿ ಭಾರೀ ಪರಿಷ್ಕರಣೆ ತರಲು ಕಂದಾಯ ಇಲಾಖೆ ಮುಂದಾಗಿದೆ. ಮೂಲಗಳ ಪ್ರಕಾರ, ಗೈಡೆನ್ಸ್ ವ್ಯಾಲ್ಯೂನಲ್ಲಿ ಶೇ. 15 - 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮಾರ್ಗದರ್ಶಿ ಮೌಲ್ಯವನ್ನು ಹೆಚ್ಚಿಸಿದರೆ ನೇರವಾಗಿ ಮುದ್ರಾಂಕ ಶುಲ್ಕ (Stamp Duty) ಮತ್ತು ನೋಂದಣಿ ಶುಲ್ಕಗಳ (Registration Fees) ಮೇಲೆ ಪರಿಣಾಮ ಬೀರಲಿದೆ. ಕಂದಾಯ ಇಲಾಖೆಯಿಂದ ಕೊಟ್ಟ ಟಾರ್ಗೆಟ್ ರೀಚ್ ಆಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬಹುದು ಎಂದು ಹೇಳಲಾಗುತ್ತಿದೆ. ಆಸ್ತಿ ನೋಂದಣಿಯಿಂದ ಬರುತ್ತಿರುವ ಆದಾಯದಲ್ಲಿ ಕೊರತೆಯನ್ನು ನೀಗಿಸಲು ಸರ್ಕಾರ ಈ ದಾರಿಯನ್ನು ಹಿಡಿಯಬಹುದು.
ಗೈಡೆನ್ಸ್ ವ್ಯಾಲ್ಯೂ ಏಪ್ರಿಲ್ ಒಂದರಿಂದ ಅಧಿಕ?
ಪರಿಷ್ಕೃತ ಮಾರ್ಗದರ್ಶಿ ಮೌಲ್ಯವನ್ನು ಜಾರಿಗೆ ತರಲು ಮತ್ತು ಇದಕ್ಕೆ ಸಂಬಂಧಿಸಿದ ಕರಡನ್ನು ಆದಷ್ಟು ಬೇಗ ಪ್ರಕಟಿಸಲು, ಕರ್ನಾಟಕ ಸರ್ಕಾರ, ನೋಂದಣಿ ಇಲಾಖೆಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಹೊಸ ದರ ಜಾರಿಗೆ ಬರಬಹುದು. ಕಂದಾಯ ಇಲಾಖೆಯ ಕಾನೂನಿನ ಪ್ರಕಾರ, ಗೈಡೆನ್ಸ್ ವ್ಯಾಲ್ಯೂವನ್ನು ಪ್ರತೀ ವರ್ಷ ಬದಲಾಯಿಸಬಹುದು.
ಕಳೆದ ಬಾರಿ ಅಂದರೆ ಅಕ್ಟೋಬರ್ 2023ರಲ್ಲಿ ಸ್ಟ್ಯಾಂಪ್ ಡ್ಯೂಟಿ ಮೊತ್ತವನ್ನು ಹೆಚ್ಚಿಸಲಾಗಿತ್ತು. ಇದೀಗ ಮೌಲ್ಯಮಾಪನ ಸಮಿತಿ, ಮತ್ತೊಮ್ಮೆ ಶುಲ್ಕ ಪರಿಷ್ಕರಣೆಗೆ ಶಿಫಾರಸನ್ನು ಮಾಡಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಸರ್ಕಾರ ಗೈಡೆನ್ಸ್ ವ್ಯಾಲ್ಯೂ ಮೇಲೆ ಶೇ. 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇ. 2ರಷ್ಟು ನೋಂದಣಿ ಶುಲ್ಕ ಮತ್ತು ಶೇ. 0.60ರಷ್ಟು ಸೆಸ್ ಮತ್ತು ಸರ್ಚಾರ್ಜ್ ಅನ್ನು ವಿಧಿಸುತ್ತದೆ. ಅಂದರೆ, ಒಟ್ಟಾರೆಯಾಗಿ ಆಸ್ತಿ ಖರೀದಿದಾರರು ಶೇ. 7.60 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ, ಅದನ್ನು ಶೇ.15 - 20ಕ್ಕೆ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm