ಬ್ರೇಕಿಂಗ್ ನ್ಯೂಸ್
01-03-26 04:51 pm HK News Desk ಕರ್ನಾಟಕ
ಶಿವಮೊಗ್ಗ, ಮಾರ್ಚ್ 1: ಅಮೇರಿಕಾದವರು ಖಮೇನಿ ಮೇಲೆ ಮಾಡಿರುವ ಯುದ್ದ ಅನಾವಶ್ಯಕವಾದ್ದು. ಇದು ತದ್ವಿರುದ್ದವಾದ ನೀತಿಯಾಗಿದೆ, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ನಾಯಕ ಖಮೇನಿ ಹತ್ಯೆ ಖಂಡನೀಯವಾದುದು. ನಾನು ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನಮ್ಮ ಸಿಎಸ್ ಜೊತೆ ಮಾತನಾಡಿದ್ದೇನೆ. ಕೇಂದ್ರದವರ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರ ವಿದೇಶಾಂಗ ಇಲಾಖೆ ಜೊತೆಗೆ ಚರ್ಚಿಸಿ ದುಬೈನಲ್ಲಿರುವ ರಾಜ್ಯದ ಜನರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ದುಬೈ ಪ್ರವಾಸದಲ್ಲಿರುವ ಭೋಜೆಗೌಡರ ಜೊತೆ ಮಾತನಾಡಿದ್ದೇನೆ. ಅಲ್ಲಿ ವಿಮಾನ ನಿಲ್ದಾಣ ಓಪನ್ ಆದ ನಂತರ ಕರೆ ಎಲ್ಲರನ್ನೂ ಕರೆತರಲಾಗುವುದು. 30 ಜನರ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಅವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿವೆ. ಪಕ್ಕದಲ್ಲಿಯೇ ನಿಂತಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಭುಜ ತಟ್ಟಿ ಸಿದ್ಧರಾಮಯ್ಯ ತಮಾಷೆಯ ನಗು ಬೀರುತ್ತಾ ವಿಪಕ್ಷದವರು ಇಲ್ಲೇ ಇದ್ದಾರೆ. ಇವರೇ ಸುಮ್ಮನೆ ಆರೋಪ ಮಾಡುತ್ತಿರುವುದು ಎಂದರು.
ದುಬೈನಲ್ಲಿರುವ ಎಲ್ಲ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ವಿದ್ಯುತ್ ದರ ಹೆಚ್ಚಳ ಪ್ರಸ್ತಾಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ ಎಂದರು. ಬಜೆಟ್ ಬಗ್ಗೆ ಕೇಳಿದ್ದಕ್ಕೆ, ಬಜೆಟ್ ಬಂದ ಮೇಲೆಯೇ ನೋಡಿ ಎಂದು ಹೇಳಿ ಆ ಕುರಿತು ಮಾತನಾಡಲು ನಿರಾಕರಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm