ಬ್ರೇಕಿಂಗ್ ನ್ಯೂಸ್
01-03-26 04:51 pm HK News Desk ಕರ್ನಾಟಕ
ಶಿವಮೊಗ್ಗ, ಮಾರ್ಚ್ 1: ಅಮೇರಿಕಾದವರು ಖಮೇನಿ ಮೇಲೆ ಮಾಡಿರುವ ಯುದ್ದ ಅನಾವಶ್ಯಕವಾದ್ದು. ಇದು ತದ್ವಿರುದ್ದವಾದ ನೀತಿಯಾಗಿದೆ, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ನಾಯಕ ಖಮೇನಿ ಹತ್ಯೆ ಖಂಡನೀಯವಾದುದು. ನಾನು ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನಮ್ಮ ಸಿಎಸ್ ಜೊತೆ ಮಾತನಾಡಿದ್ದೇನೆ. ಕೇಂದ್ರದವರ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರ ವಿದೇಶಾಂಗ ಇಲಾಖೆ ಜೊತೆಗೆ ಚರ್ಚಿಸಿ ದುಬೈನಲ್ಲಿರುವ ರಾಜ್ಯದ ಜನರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ದುಬೈ ಪ್ರವಾಸದಲ್ಲಿರುವ ಭೋಜೆಗೌಡರ ಜೊತೆ ಮಾತನಾಡಿದ್ದೇನೆ. ಅಲ್ಲಿ ವಿಮಾನ ನಿಲ್ದಾಣ ಓಪನ್ ಆದ ನಂತರ ಕರೆ ಎಲ್ಲರನ್ನೂ ಕರೆತರಲಾಗುವುದು. 30 ಜನರ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಅವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿವೆ. ಪಕ್ಕದಲ್ಲಿಯೇ ನಿಂತಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಭುಜ ತಟ್ಟಿ ಸಿದ್ಧರಾಮಯ್ಯ ತಮಾಷೆಯ ನಗು ಬೀರುತ್ತಾ ವಿಪಕ್ಷದವರು ಇಲ್ಲೇ ಇದ್ದಾರೆ. ಇವರೇ ಸುಮ್ಮನೆ ಆರೋಪ ಮಾಡುತ್ತಿರುವುದು ಎಂದರು.
ದುಬೈನಲ್ಲಿರುವ ಎಲ್ಲ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ವಿದ್ಯುತ್ ದರ ಹೆಚ್ಚಳ ಪ್ರಸ್ತಾಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ ಎಂದರು. ಬಜೆಟ್ ಬಗ್ಗೆ ಕೇಳಿದ್ದಕ್ಕೆ, ಬಜೆಟ್ ಬಂದ ಮೇಲೆಯೇ ನೋಡಿ ಎಂದು ಹೇಳಿ ಆ ಕುರಿತು ಮಾತನಾಡಲು ನಿರಾಕರಿಸಿದರು.
25-04-26 10:56 pm
HK Staffer
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
25-04-26 03:54 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
25-04-26 01:45 pm
HK News Staffer
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
25-04-26 10:43 pm
Mangalore Correspondent
ಉಡುಪಿ ; ಸಂಸ್ಕೃತ ಕಾಲೇಜಿನ ಉಪನ್ಯಾಸಕ ಬಾವಿಯಲ್ಲಿ ಶ...
25-04-26 03:57 pm
ಮಣಿಪಾಲದಲ್ಲಿ ಪಬ್ಲಿಕ್ನಲ್ಲೇ ವಿದ್ಯಾರ್ಥಿಗಳ ಓಪನ್ ರೋ...
25-04-26 02:05 pm
ಕಾರ್ಕಳ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಬೈಕ್ ಗೆ ಡಿಕ...
25-04-26 12:55 pm
ವೇಣೂರು ; ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ...
24-04-26 04:37 pm