ಬ್ರೇಕಿಂಗ್ ನ್ಯೂಸ್
01-03-26 05:16 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮಾರ್ಚ್ 1: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಸುದ್ದಿಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಶಿಯಾ ಮುಸ್ಲಿಮರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಅಘೋಷಿತ ಬಂದ್ ಆಚರಿಸಿದ್ದಾರೆ. ಜೊತೆಗೆ ಮೂರು ದಿನ ಸ್ವಯಂಪ್ರೇರಿತ ‘ಕರಾಳ ದಿನ’ ಆಚರಿಸಲು ತೀರ್ಮಾನಿಸಿದ್ದಾರೆ.
ಬೆಳಗ್ಗಿನಿಂದಲೇ ನೂರಾರು ಗ್ರಾಮಸ್ಥರು ರಸ್ತೆಗಿಳಿದು ಖಮೇನಿ ಅವರ ಭಾವಚಿತ್ರಗಳನ್ನು ಹಿಡಿದು ಕಣ್ಣೀರು ಹಾಕಿ ಶೋಕಾಚರಣೆ ನಡೆಸಿದರು. ಇರಾನ್ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಂಜುಮನ್ ಎ ಜಾಫರಿಯಾ ಸಮಿತಿ ನೇತೃತ್ವದಲ್ಲಿ ಸಂಜೆ ವೇಳೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಅಲೀಪುರ–ಇರಾನ್ ಬಾಂಧವ್ಯ
ಅಲೀಪುರ ಗ್ರಾಮಕ್ಕೆ ಇರಾನ್ ಜೊತೆಗಿನ ಧಾರ್ಮಿಕ ಮತ್ತು ಭಾವನಾತ್ಮಕ ನಂಟು ದಶಕಗಳ ಇತಿಹಾಸ ಹೊಂದಿದೆ. 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅಲೀಪುರಕ್ಕೆ ಭೇಟಿ ನೀಡಿದ್ದರೆಂಬ ಮಾಹಿತಿ ಸ್ಥಳೀಯರಲ್ಲಿ ಇದೆ. ಅವರ ಗುರು ಅಯತೊಲ್ಲಾ ಇಮಾಮ್ ಖಮೇನಿ ಅವರ ಹೆಸರಿನಲ್ಲಿ ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣವಾಗಿದ್ದು, ಅದರ ಉದ್ಘಾಟನೆಗೂ ಅವರು ಆಗಮಿಸಿದ್ದರು ಎನ್ನಲಾಗುತ್ತದೆ.
ಈ ಹಿಂದೆ ‘ಬೆಳ್ಳಿಕುಂಟೆ’ ಎಂದು ಕರೆಯಲ್ಪಡುತ್ತಿದ್ದ ಗ್ರಾಮವು ಬಿಜಾಪುರದ ಆದಿಲ್ಶಾಹಿಗಳ ಕಾಲದಲ್ಲಿ ವಲಸೆ ಬಂದವರಿಂದ ‘ಅಲೀಪುರ’ವಾಗಿ ರೂಪಾಂತರಗೊಂಡಿತೆಂಬ ಐತಿಹಾಸಿಕ ಉಲ್ಲೇಖವೂ ಇದೆ. ಸುಮಾರು 20 ಸಾವಿರ ಜನಸಂಖ್ಯೆಯ ಈ ಗ್ರಾಮದಲ್ಲಿ ಶಿಯಾ ಮುಸ್ಲಿಮರದ್ದೇ ಪ್ರಾಬಲ್ಯವಿದೆ. ವೈದ್ಯಕೀಯ ಹಾಗೂ ಧಾರ್ಮಿಕ ಶಿಕ್ಷಣಕ್ಕಾಗಿ ಅನೇಕರು ಇರಾನ್ ಅವಲಂಬಿಸಿಕೊಂಡಿದ್ದು, ಕೆಲವರು ಅಲ್ಲಿ ನೆಲೆಸಿದ್ದಾರೆ.
ಗ್ರಾಮದಲ್ಲಿರುವ ‘ಅಲಿ ಟಿವಿ’ ಮೂಲಕ ಖಮೇನಿ ಅವರ ಧಾರ್ಮಿಕ ಪ್ರವಚನಗಳು ಪ್ರಸಾರವಾಗುತ್ತಿದ್ದು, ಅವರ ಧಾರ್ಮಿಕ ಆದೇಶಗಳನ್ನು ಪಾಲಿಸುವ ದೊಡ್ಡ ಸಮುದಾಯವೇ ಇಲ್ಲಿದೆ. ಇರಾನ್ನಲ್ಲಿ ಯುದ್ಧ ಸಂಭವಿಸಿದಾಗಲೆಲ್ಲಾ ಅಲೀಪುರ ನಿವಾಸಿಗಳಲ್ಲಿ ಆತಂಕ ಮನೆ ಮಾಡುವುದು ಸಾಮಾನ್ಯ. ಸದ್ಯ ಖಮೇನಿ ಅವರ ಸಾವಿನ ಸುದ್ದಿಯಿಂದ ಗ್ರಾಮವೇ ಮೌನಕ್ಕೆ ಜಾರಿದ್ದು, ಭಾರೀ ಶೋಕ ವಾತಾವರಣ ಆವರಿಸಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm