ಬ್ರೇಕಿಂಗ್ ನ್ಯೂಸ್
04-03-26 11:51 am HK News Staffer ಕರ್ನಾಟಕ
ಚಿಕ್ಕಮಗಳೂರು,ಮಾ 04: ಇರಾನ್–ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯುವಕನೊಬ್ಬ ಸಂಪರ್ಕಕ್ಕೆ ಸಿಗದಿರುವ ಘಟನೆ ಕುಟುಂಬವನ್ನು ಆತಂಕಕ್ಕೀಡಾಗಿಸಿದೆ. ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ ಪ್ರಸ್ತುತ ಯುದ್ಧ ಪೀಡಿತ ಇರಾನ್ ಪ್ರದೇಶದಲ್ಲಿರುವ ಶಂಕೆ ವ್ಯಕ್ತವಾಗಿದ್ದು, ಕಳೆದ ಕೆಲವು ದಿನಗಳಿಂದ ಕುಟುಂಬಸ್ಥರೊಂದಿಗೆ ಸಂಪರ್ಕಕ್ಕೆ ಸಿಗುತ್ತಿಲ್ಲ. ಇದು ಕುಟುಂಬಸ್ಥರಿಗೆ ತೀವ್ರ ಚಿಂತೆ ಉಂಟು ಮಾಡಿದೆ.
ಮರ್ಚಂಟ್ ನೇವಿಯಲ್ಲಿ ವೃತ್ತಿ ಆರಂಭಿಸಿದ್ದ ನಿಶ್ಚಿತ್, ಕಳೆದ ಐದು ತಿಂಗಳ ಹಿಂದೆ ಉದ್ಯೋಗ ನಿಮಿತ್ತ ಇರಾನ್ಗೆ ತೆರಳಿದ್ದರು. ಆದರೆ ಅಮೆರಿಕ ಬೆಂಬಲಿತ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಪರಿಸ್ಥಿತಿ ಉಲ್ಬಣಗೊಂಡಿರುವ ಸಂದರ್ಭದಲ್ಲಿ ಕ್ಷಿಪಣಿ ದಾಳಿಗಳು ಮುಂದುವರಿಯುತ್ತಿರುವುದರಿಂದ ಆತನ ಸುರಕ್ಷತೆ ಬಗ್ಗೆ ಕುಟುಂಬಸ್ಥರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ.
ನಿಶ್ಚಿತ್ ಅವರ ಮೊಬೈಲ್ ಫೋನ್ ಕಳೆದ ಕೆಲವು ದಿನಗಳಿಂದ ಸ್ವಿಚ್ ಆಫ್ ಆಗಿದ್ದು, ಅವರ ಸ್ಥಿತಿಗತಿ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಗನ ಕರೆಗಾಗಿ ದಿನನಿತ್ಯ ಕಾಯುತ್ತಿರುವ ಪೋಷಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೆರವಿಗಾಗಿ ಮನವಿ ಮಾಡಿದ್ದಾರೆ. ವಿದೇಶಾಂಗ ಇಲಾಖೆಯ ಮೂಲಕ ತಕ್ಷಣ ಮಾಹಿತಿ ಸಂಗ್ರಹಿಸಿ, ನಿಶ್ಚಿತ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಗ್ರಾಮದಲ್ಲಿ ಈ ಬೆಳವಣಿಗೆ ಆತಂಕದ ವಾತಾವರಣವನ್ನು ಸೃಷ್ಟಿಸಿದ್ದು, ಕುಟುಂಬದವರು ಕಣ್ಣೀರಿನ ಮನವಿ ಮಾಡಿದ್ದಾರೆ. ಪ್ರಸ್ತುತ ಜಿಲ್ಲಾಡಳಿತ ಅಥವಾ ಸ್ಥಳೀಯ ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದಷ್ಟು ಬೇಗ ತಮ್ಮ ಮಗನನ್ನು ವಾಪಸ್ ಕರೆತನ್ನಿ ಎಂದು ನಿಶ್ಚಿತ್ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.
ಬದುಕು ಕಟ್ಟಿಕೊಳ್ಳಲು ಇರಾನ್ಗೆ ಹೋಗಿದ್ದ ನಿಶ್ಚಿತ್!
ಬದುಕು ಕಟ್ಟಿಕೊಳ್ಳಲು ನಿಶ್ಚಿತ್ ಇರಾನ್ಗೆ ತೆರಳಿದ್ದನಂತೆ. ಮರ್ಚೆಂಟ್ ನೇವಿ ಉದ್ಯೋಗಿಯಾಗಿದ್ದ ನಿಶ್ಚಿತ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದವರಾಗಿದ್ದಾರೆ. ಐದು ತಿಂಗಳ ಹಿಂದೆಷ್ಟೇ ಇರಾನ್ ನಲ್ಲಿ ಮರ್ಚೆಂಟ್ ನೇವಿಯಲ್ಲಿ ಕೆಲಸ ಶುರು ಮಾಡಿದ್ದರು.
ಒಂದು ವಾರದ ಹಿಂದೆ ಇರಾನ್ ನಿಂದ ಕುವೈಟ್ ಗೆ ತೆರಳುವುದಾಗಿ ಕೊನೆಯ ಕರೆಯಲ್ಲಿ ಹೇಳಿದ್ದ ನಿಶ್ಚಿತ್ ಬಗ್ಗೆ ಮಾಹಿತಿ ಸಿಗದೆ ಕುಟುಂಬ ಕಂಗಾಲಾಗಿದೆ. ಮಗನನ್ನು ವಾಪಸ್ ಕರೆಸಿ ಎಂದು ತಂದೆ ಮಹೇಶ್ ಕೇಳಿಕೊಳ್ತಿದ್ದಾರೆ. ನಿಶ್ಚಿತ್ ಇರಾನ್ನಲ್ಲೇ ಇದ್ದಾನಾ? ಅಥವಾ ಕುವೈಟ್ಗೆ ಹೋಗಿದ್ದಾನಾ? ಅನ್ನೋ ಯಾವ ಮಾಹಿತಿ ಇದುವರೆಗೆ ಸಿಕ್ಕಿಲ್ಲ ಎನ್ನಲಾಗ್ತಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm