ಬ್ರೇಕಿಂಗ್ ನ್ಯೂಸ್
04-03-26 01:27 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4: ನಾಯಕತ್ವ ಬದಲಾವಣೆಯ ಕೂಗಿನ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಚ್ 10 ರಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಆಯೋಜಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 10ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರು, ಶಾಸಕರಿಗೂ ಆಹ್ವಾನ ನೀಡಲಾಗಿದೆ.
ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳಲಿದೆ. ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸಚಿವರು, ಎಲ್ಲ ಶಾಸಕರು, ಪರಿಷತ್ ಸದಸ್ಯರು ಹಾಗೂ ಕೆಲವು ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, 6 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತೃಪ್ತಿ ಇದೆ. ಕಾಂಗ್ರೆಸ್ಗೆ ಶಕ್ತಿ ತುಂಬಲು ಹೊಸ ರಕ್ತ ಬರಬೇಕು. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸ್ಟ್ರೀಟ್ ಫೈಟರ್, ಯಾವ ರೀತಿ ಹೋರಾಟ ಮಾಡಬೇಕೆಂದು ಗೊತ್ತಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿಎಂ ಸ್ಥಾನಕ್ಕೆ ಪ್ರಬಲ ಹಕ್ಕೊತ್ತಾಯ ಮಾಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.
ನಾನು ಸಿಎಂ ಬದಲಾವಣೆ ಆಗಬೇಕು, ದಲಿತ ಸಿಎಂ ಆಗಬೇಕು ಎಂದು ಹೇಳಿಯೇ ಇಲ್ಲ. ಆದರೆ ಗುಪ್ತ ಮಾತುಕತೆಯ ಸಂದರ್ಭದಲ್ಲಿ ನಾನೂ ಜೊತೆಗಿದ್ದೆ. ಅದರ ಬಗ್ಗೆ ಕ್ಲಾರಿಟಿ ಬೇಕಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಆಕಾಂಕ್ಷೆ ತೋರಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿದ್ದು ಈ ವೇಳೆ ಹೊಸ ದಾಳ ಎಸೆಯಲು ಡಿಕೆಶಿ ಸಜ್ಜಾಗಿರುವಂತಿದೆ. ಅದೇ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಾಕು, ಹೊಸ ರಕ್ತ ಬರಬೇಕು ಎಂದು ಹೇಳಿದ್ದು ಎನ್ನುವ ಮಾತುಗಳಿವೆ.
ಡಿನ್ನರ್ ಪಾರ್ಟಿ ಮೂಲಕ ಎಲ್ಲ ಹಿರಿಯ ಸಚಿವರು, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಜೊತೆಗೆ ಎಲ್ಲರ ಒಪ್ಪಿಗೆಯ ನಾಯಕ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರಿಗೆ ನೀಡುವುದು ಡಿಕೆಶಿ ಅಜೆಂಡಾ ಎನ್ನಲಾಗುತ್ತಿದೆ.
25-04-26 10:56 pm
HK Staffer
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
25-04-26 03:54 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
25-04-26 01:45 pm
HK News Staffer
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
25-04-26 10:43 pm
Mangalore Correspondent
ಉಡುಪಿ ; ಸಂಸ್ಕೃತ ಕಾಲೇಜಿನ ಉಪನ್ಯಾಸಕ ಬಾವಿಯಲ್ಲಿ ಶ...
25-04-26 03:57 pm
ಮಣಿಪಾಲದಲ್ಲಿ ಪಬ್ಲಿಕ್ನಲ್ಲೇ ವಿದ್ಯಾರ್ಥಿಗಳ ಓಪನ್ ರೋ...
25-04-26 02:05 pm
ಕಾರ್ಕಳ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಬೈಕ್ ಗೆ ಡಿಕ...
25-04-26 12:55 pm
ವೇಣೂರು ; ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ...
24-04-26 04:37 pm