ಬ್ರೇಕಿಂಗ್ ನ್ಯೂಸ್
04-03-26 01:27 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4: ನಾಯಕತ್ವ ಬದಲಾವಣೆಯ ಕೂಗಿನ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಚ್ 10 ರಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಆಯೋಜಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 10ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರು, ಶಾಸಕರಿಗೂ ಆಹ್ವಾನ ನೀಡಲಾಗಿದೆ.
ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳಲಿದೆ. ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸಚಿವರು, ಎಲ್ಲ ಶಾಸಕರು, ಪರಿಷತ್ ಸದಸ್ಯರು ಹಾಗೂ ಕೆಲವು ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, 6 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತೃಪ್ತಿ ಇದೆ. ಕಾಂಗ್ರೆಸ್ಗೆ ಶಕ್ತಿ ತುಂಬಲು ಹೊಸ ರಕ್ತ ಬರಬೇಕು. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸ್ಟ್ರೀಟ್ ಫೈಟರ್, ಯಾವ ರೀತಿ ಹೋರಾಟ ಮಾಡಬೇಕೆಂದು ಗೊತ್ತಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿಎಂ ಸ್ಥಾನಕ್ಕೆ ಪ್ರಬಲ ಹಕ್ಕೊತ್ತಾಯ ಮಾಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.
ನಾನು ಸಿಎಂ ಬದಲಾವಣೆ ಆಗಬೇಕು, ದಲಿತ ಸಿಎಂ ಆಗಬೇಕು ಎಂದು ಹೇಳಿಯೇ ಇಲ್ಲ. ಆದರೆ ಗುಪ್ತ ಮಾತುಕತೆಯ ಸಂದರ್ಭದಲ್ಲಿ ನಾನೂ ಜೊತೆಗಿದ್ದೆ. ಅದರ ಬಗ್ಗೆ ಕ್ಲಾರಿಟಿ ಬೇಕಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಆಕಾಂಕ್ಷೆ ತೋರಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿದ್ದು ಈ ವೇಳೆ ಹೊಸ ದಾಳ ಎಸೆಯಲು ಡಿಕೆಶಿ ಸಜ್ಜಾಗಿರುವಂತಿದೆ. ಅದೇ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಾಕು, ಹೊಸ ರಕ್ತ ಬರಬೇಕು ಎಂದು ಹೇಳಿದ್ದು ಎನ್ನುವ ಮಾತುಗಳಿವೆ.
ಡಿನ್ನರ್ ಪಾರ್ಟಿ ಮೂಲಕ ಎಲ್ಲ ಹಿರಿಯ ಸಚಿವರು, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಜೊತೆಗೆ ಎಲ್ಲರ ಒಪ್ಪಿಗೆಯ ನಾಯಕ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರಿಗೆ ನೀಡುವುದು ಡಿಕೆಶಿ ಅಜೆಂಡಾ ಎನ್ನಲಾಗುತ್ತಿದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm