ಬ್ರೇಕಿಂಗ್ ನ್ಯೂಸ್
04-03-26 01:27 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4: ನಾಯಕತ್ವ ಬದಲಾವಣೆಯ ಕೂಗಿನ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಚ್ 10 ರಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಆಯೋಜಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 10ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರು, ಶಾಸಕರಿಗೂ ಆಹ್ವಾನ ನೀಡಲಾಗಿದೆ.
ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳಲಿದೆ. ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸಚಿವರು, ಎಲ್ಲ ಶಾಸಕರು, ಪರಿಷತ್ ಸದಸ್ಯರು ಹಾಗೂ ಕೆಲವು ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, 6 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತೃಪ್ತಿ ಇದೆ. ಕಾಂಗ್ರೆಸ್ಗೆ ಶಕ್ತಿ ತುಂಬಲು ಹೊಸ ರಕ್ತ ಬರಬೇಕು. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸ್ಟ್ರೀಟ್ ಫೈಟರ್, ಯಾವ ರೀತಿ ಹೋರಾಟ ಮಾಡಬೇಕೆಂದು ಗೊತ್ತಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿಎಂ ಸ್ಥಾನಕ್ಕೆ ಪ್ರಬಲ ಹಕ್ಕೊತ್ತಾಯ ಮಾಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.
ನಾನು ಸಿಎಂ ಬದಲಾವಣೆ ಆಗಬೇಕು, ದಲಿತ ಸಿಎಂ ಆಗಬೇಕು ಎಂದು ಹೇಳಿಯೇ ಇಲ್ಲ. ಆದರೆ ಗುಪ್ತ ಮಾತುಕತೆಯ ಸಂದರ್ಭದಲ್ಲಿ ನಾನೂ ಜೊತೆಗಿದ್ದೆ. ಅದರ ಬಗ್ಗೆ ಕ್ಲಾರಿಟಿ ಬೇಕಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಆಕಾಂಕ್ಷೆ ತೋರಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿದ್ದು ಈ ವೇಳೆ ಹೊಸ ದಾಳ ಎಸೆಯಲು ಡಿಕೆಶಿ ಸಜ್ಜಾಗಿರುವಂತಿದೆ. ಅದೇ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಾಕು, ಹೊಸ ರಕ್ತ ಬರಬೇಕು ಎಂದು ಹೇಳಿದ್ದು ಎನ್ನುವ ಮಾತುಗಳಿವೆ.
ಡಿನ್ನರ್ ಪಾರ್ಟಿ ಮೂಲಕ ಎಲ್ಲ ಹಿರಿಯ ಸಚಿವರು, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಜೊತೆಗೆ ಎಲ್ಲರ ಒಪ್ಪಿಗೆಯ ನಾಯಕ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರಿಗೆ ನೀಡುವುದು ಡಿಕೆಶಿ ಅಜೆಂಡಾ ಎನ್ನಲಾಗುತ್ತಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm