ಬ್ರೇಕಿಂಗ್ ನ್ಯೂಸ್
05-03-26 09:40 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 5 : ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಸಂಘರ್ಷಗಳಿಗೆ "ತ್ವರಿತ ಅಂತ್ಯ" ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಸಂಘರ್ಷದ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
"ಭಾರತ ಮತ್ತು ಫಿನ್ ಲ್ಯಾಂಡ್ ಎರಡೂ ರಾಷ್ಟ್ರಗಳು ಕಾನೂನು, ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಯಾವುದೇ ಸಮಸ್ಯೆಯನ್ನು ಮಿಲಿಟರಿ ಸಂಘರ್ಷದಿಂದ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ನಾವು ಒಪ್ಪುತ್ತೇವೆ" ಎಂದು ಅವರು ಹೇಳಿದರು.
"ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳು ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುವುದನ್ನು ನಾವು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ-ಫಿನ್ಲ್ಯಾಂಡ್ ಸಂಬಂಧವನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆ ಕ್ಷೇತ್ರದಲ್ಲಿ ವ್ಯೂಹಾತ್ಮಕ ಪಾಲುದಾರಿಕೆಗೆ ಏರಿಸಲು ಉಭಯ ನಾಯಕರು ಒಪ್ಪಂದ ಮಾಡಿಕೊಂಡರು. "AI ನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್ ವರೆಗಿನ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ" ಎಂದು ಅವರು ಹೇಳಿದರು.
ಭಾರತ ಮತ್ತು ಯುರೋಪಿಯನ್ ಯೂನಿಯನ್(ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ಇದೇ ವೇಳೆ ಹೇಳಿದರು. "ಈ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm