ಬ್ರೇಕಿಂಗ್ ನ್ಯೂಸ್
05-03-26 09:40 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 5 : ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಸಂಘರ್ಷಗಳಿಗೆ "ತ್ವರಿತ ಅಂತ್ಯ" ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಸಂಘರ್ಷದ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
"ಭಾರತ ಮತ್ತು ಫಿನ್ ಲ್ಯಾಂಡ್ ಎರಡೂ ರಾಷ್ಟ್ರಗಳು ಕಾನೂನು, ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಯಾವುದೇ ಸಮಸ್ಯೆಯನ್ನು ಮಿಲಿಟರಿ ಸಂಘರ್ಷದಿಂದ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ನಾವು ಒಪ್ಪುತ್ತೇವೆ" ಎಂದು ಅವರು ಹೇಳಿದರು.
"ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳು ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುವುದನ್ನು ನಾವು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ-ಫಿನ್ಲ್ಯಾಂಡ್ ಸಂಬಂಧವನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆ ಕ್ಷೇತ್ರದಲ್ಲಿ ವ್ಯೂಹಾತ್ಮಕ ಪಾಲುದಾರಿಕೆಗೆ ಏರಿಸಲು ಉಭಯ ನಾಯಕರು ಒಪ್ಪಂದ ಮಾಡಿಕೊಂಡರು. "AI ನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್ ವರೆಗಿನ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ" ಎಂದು ಅವರು ಹೇಳಿದರು.
ಭಾರತ ಮತ್ತು ಯುರೋಪಿಯನ್ ಯೂನಿಯನ್(ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ಇದೇ ವೇಳೆ ಹೇಳಿದರು. "ಈ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm