ಬ್ರೇಕಿಂಗ್ ನ್ಯೂಸ್
07-03-26 12:01 pm HK News Staffer ಕರ್ನಾಟಕ
ವಿಜಯವಾಡ, ಮಾರ್ಚ್ 06: ಜನಸಂಖ್ಯೆ ಕುಸಿತದ ಹಿನ್ನೆಲೆ ದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜನ ನೀಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಯೋಜನೆ ಘೋಷಿಸಿದೆ. 3ನೇ ಮಗುವಿಗೆ ₹25,000 ನಗದು ಪ್ರೋತ್ಸಾಹಧನ ಹಾಗೂ 18 ವರ್ಷದ ತನಕ ಉಚಿತ ಶಿಕ್ಷಣ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದರ ಕುರಿತ ಕರಡು ಮಸೂದೆಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಈ ಯೋಜನೆಯನ್ನು ಏಪ್ರಿಲ್ 1ರಿಂದ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ.
‘ಪೋಷಣ–ಶಿಕ್ಷಾ–ಸುರಕ್ಷಾ ಪ್ಯಾಕೇಜ್’ ಅಡಿಯಲ್ಲಿ ಈ ಯೋಜನೆ ಜಾರಿಯಾಗಲಿದೆ. ಇದರ ಜೊತೆಗೆ, ಕೆಲಸ ಮಾಡುವ ತಾಯಂದಿರಿಗೆ 12 ತಿಂಗಳ ಮಾತೃತ್ವ ರಜೆ ಹಾಗೂ ತಂದೆಗಳಿಗೆ 2 ತಿಂಗಳ ಪಿತೃತ್ವ ರಜೆ ನೀಡುವ ಪ್ರಸ್ತಾವನೆಯೂ ಇದೆ. ಐವಿಎಫ್ (IVF) ಮೂಲಕ ಮಗು ಪಡೆಯಲು ಬಯಸುವ ದಂಪತಿಗಳಿಗೆ ಸಬ್ಸಿಡಿ ದರದಲ್ಲಿ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.
ಇದೇ ವೇಳೆ, 3 ಮಕ್ಕಳನ್ನು ಹೊಂದಿರುವ ಸರ್ಕಾರಿ ನೌಕರರು ನಿವೃತ್ತಿಯ ವಯಸ್ಸಿನ ಹಂತಕ್ಕೆ ಬಂದಾಗ ಅವರಿಗೆ 15 ದಿನಗಳ ಯೋಗಕ್ಷೇಮ ರಜೆ ಹಾಗೂ ₹50,000 ಆರೋಗ್ಯ ನಿಧಿ ನೀಡುವ ವ್ಯವಸ್ಥೆಯೂ ಯೋಜನೆಯಲ್ಲಿ ಸೇರಿಸಲಾಗಿದೆ.
ಯೋಜನೆಗೆ ಕಾರಣವೇನು?
ಆಂಧ್ರಪ್ರದೇಶದಲ್ಲಿ ಜನನ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 1993ರಲ್ಲಿ ರಾಜ್ಯದ ಒಟ್ಟು ಫಲವತ್ತತೆ ದರ (ಟಿಎಫ್ಆರ್) 3.0 ಇತ್ತಾದರೆ, ಇದೀಗ ಅದು 1.4ಕ್ಕೆ ಇಳಿದಿದೆ. ಇದು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ.
ಈ ಪರಿಸ್ಥಿತಿ ಮುಂದುವರೆದರೆ ರಾಜ್ಯದ ಆರ್ಥಿಕ ಬೆಳವಣಿಗೆಗೂ ಹಾಗೂ ಭವಿಷ್ಯದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಜನಸಂಖ್ಯೆ ಕುಸಿತ ತಡೆಯಲು ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಇದ್ದ ಸ್ಪರ್ಧಾ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿತ್ತು. ಇದೀಗ ದಂಪತಿಗಳನ್ನು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜಿಸುವ ಉದ್ದೇಶದಿಂದ ಹೊಸ ಯೋಜನೆಯನ್ನು ಘೋಷಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm