ಬ್ರೇಕಿಂಗ್ ನ್ಯೂಸ್
09-03-26 04:17 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 9: ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿವಿ ನೆಟ್ಟಗಾಗಿಸಿದ್ದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿ ಕುತೂಹಲ ಮೂಡಿಸಿದ್ದಾರೆ.
ಭಾನುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿ ತೆರಳಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ದಿಲ್ಲಿಗೆ ತೆರಳುತ್ತಿರುವುದಾಗಿ ಡಿ.ಕೆ.ಶಿವಕುಮಾರ್ ಕಚೇರಿ ಮಾಹಿತಿ ನೀಡಿದೆ. ಆದರೆ ವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಬೇಕಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕಾದರೆ ‘ಸಮರ್ಥ ನಾಯಕತ್ವ ಬೇಕು’ ಎಂಬ ಬೇಡಿಕೆಯನ್ನು ಡಿ.ಕೆ.ಶಿವಕುಮಾರ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಶಿವಕುಮಾರ್ ಅವರಿಗೆ ನಿಷ್ಠರಾಗಿರುವ ಕೆಲವು ಶಾಸಕರು, ವಿಧಾನಸಭೆಯ ಬಜೆಟ್ ಅಧಿವೇಶನದ ನಂತರ ತಮ್ಮ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಲು ದೆಹಲಿಗೆ ಪ್ರಯಾಣಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಲಿದೆ.
ಏತನ್ಮಧ್ಯೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಶಿವಕುಮಾರ್ ಅವರು ಮಾರ್ಚ್ 10 ರಂದು ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ಎಂಎಲ್ಸಿಗಳಿಗೆ ಭೋಜನ ಕೂಟವನ್ನು ಆಯೋಜಿಸಿದ್ದಾರೆ. ಭೋಜನ ಕೂಟವನ್ನು ಎಲ್ಲ ಶಾಸಕರ ವಿಶ್ವಾಸ ಗಳಿಸುವುದಕ್ಕಾಗಿ ಏರ್ಪಡಿಸಿದ್ದಾರೆಂದು ಹೇಳಲಾಗುತ್ತಿದ್ದರೂ ಅದೇ ಸಮಯದಲ್ಲಿ ಡಿಕೆ ದೆಹಲಿಗೆ ದೌಡಾಯಿಸಿ ಅಚ್ಚರಿ ಮೂಡಿಸಿದ್ದಾರೆ.
25-04-26 10:56 pm
HK Staffer
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
25-04-26 03:54 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
25-04-26 01:45 pm
HK News Staffer
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
25-04-26 10:43 pm
Mangalore Correspondent
ಉಡುಪಿ ; ಸಂಸ್ಕೃತ ಕಾಲೇಜಿನ ಉಪನ್ಯಾಸಕ ಬಾವಿಯಲ್ಲಿ ಶ...
25-04-26 03:57 pm
ಮಣಿಪಾಲದಲ್ಲಿ ಪಬ್ಲಿಕ್ನಲ್ಲೇ ವಿದ್ಯಾರ್ಥಿಗಳ ಓಪನ್ ರೋ...
25-04-26 02:05 pm
ಕಾರ್ಕಳ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಬೈಕ್ ಗೆ ಡಿಕ...
25-04-26 12:55 pm
ವೇಣೂರು ; ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ...
24-04-26 04:37 pm