ಬ್ರೇಕಿಂಗ್ ನ್ಯೂಸ್
09-03-26 04:17 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 9: ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿವಿ ನೆಟ್ಟಗಾಗಿಸಿದ್ದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿ ಕುತೂಹಲ ಮೂಡಿಸಿದ್ದಾರೆ.
ಭಾನುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿ ತೆರಳಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ದಿಲ್ಲಿಗೆ ತೆರಳುತ್ತಿರುವುದಾಗಿ ಡಿ.ಕೆ.ಶಿವಕುಮಾರ್ ಕಚೇರಿ ಮಾಹಿತಿ ನೀಡಿದೆ. ಆದರೆ ವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಬೇಕಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕಾದರೆ ‘ಸಮರ್ಥ ನಾಯಕತ್ವ ಬೇಕು’ ಎಂಬ ಬೇಡಿಕೆಯನ್ನು ಡಿ.ಕೆ.ಶಿವಕುಮಾರ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಶಿವಕುಮಾರ್ ಅವರಿಗೆ ನಿಷ್ಠರಾಗಿರುವ ಕೆಲವು ಶಾಸಕರು, ವಿಧಾನಸಭೆಯ ಬಜೆಟ್ ಅಧಿವೇಶನದ ನಂತರ ತಮ್ಮ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಲು ದೆಹಲಿಗೆ ಪ್ರಯಾಣಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಲಿದೆ.
ಏತನ್ಮಧ್ಯೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಶಿವಕುಮಾರ್ ಅವರು ಮಾರ್ಚ್ 10 ರಂದು ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ಎಂಎಲ್ಸಿಗಳಿಗೆ ಭೋಜನ ಕೂಟವನ್ನು ಆಯೋಜಿಸಿದ್ದಾರೆ. ಭೋಜನ ಕೂಟವನ್ನು ಎಲ್ಲ ಶಾಸಕರ ವಿಶ್ವಾಸ ಗಳಿಸುವುದಕ್ಕಾಗಿ ಏರ್ಪಡಿಸಿದ್ದಾರೆಂದು ಹೇಳಲಾಗುತ್ತಿದ್ದರೂ ಅದೇ ಸಮಯದಲ್ಲಿ ಡಿಕೆ ದೆಹಲಿಗೆ ದೌಡಾಯಿಸಿ ಅಚ್ಚರಿ ಮೂಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm