ಬ್ರೇಕಿಂಗ್ ನ್ಯೂಸ್
10-03-26 10:49 am HK News Staffer ಕರ್ನಾಟಕ
ಬೆಂಗಳೂರು, ಮಾ.10: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದ ಪಾರ್ಸೆಲ್ವೊಂದು ಬಂದಿದ್ದು, ಅದರೊಳಗಿನ ವಸ್ತುಗಳನ್ನು ಕಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ನಲ್ಲಿ ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ, ಹೂವಿನ ಹಾರ ಸೇರಿದಂತೆ ಹಲವು ವಿಚಿತ್ರ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್ಗೆ ಬಂದಿದ್ದ ಈ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತ ಕೊಳೆತ ಟೊಮೆಟೋ, ಹೂವಿನ ಹಾರ, ಕಬ್ಬಿಣದ ತುಂಡು ಹಾಗೂ ಟೂತ್ಪೇಸ್ಟ್ ಇಟ್ಟಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಕಂಡ ಸಿಬ್ಬಂದಿ ಅಚ್ಚರಿಗೊಳಗಾಗಿದ್ದಾರೆ.
ಆ ಎಲ್ಲ ವಸ್ತುಗಳಿಗೆ ಪ್ಯಾಕ್ ಮಾಡಿ ಯಾರೋ ಕಿರಾತಕರು ಪಾರ್ಸೆಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪಾರ್ಸೆಲ್ನಲ್ಲಿದ್ದ ವಸ್ತುಗಳನ್ನು ನೋಡಿ ಅಲ್ಲಿನ ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರಾಸಕ್ತಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸದ್ಯ ಈ ಪಾರ್ಸೆಲ್ ಯಾರು ಕಳುಹಿಸಿದ್ದಾರೆ ಮತ್ತು ಇದರ ಹಿಂದೆ ಇರುವ ಉದ್ದೇಶ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm