ಬ್ರೇಕಿಂಗ್ ನ್ಯೂಸ್
11-03-26 11:48 am HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 11: ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಸರ್ಕಾರದ ಕ್ರಮಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಈಗಾಗಲೇ ಅನೇಕ ಬೋಧಕೇತರ ಜವಾಬ್ದಾರಿಗಳು ನೀಡಲಾಗಿರುವ ಸಂದರ್ಭದಲ್ಲಿ ಇಂತಹ ಕೆಲಸಗಳನ್ನು ನೀಡುವುದು ಹಾಸ್ಯಾಸ್ಪದ ಹಾಗೂ ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹೊರಟ್ಟಿ ಪತ್ರದಲ್ಲಿ, ರಾಜ್ಯದ ಶಿಕ್ಷಕರು ಈಗಾಗಲೇ ಮತದಾನ ಕಾರ್ಯಗಳು, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಆಡಳಿತಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಇದರ ಜೊತೆಗೆ ಶಾಲಾ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ವಿತರಣೆ ಸೇರಿದಂತೆ ಹಲವು ಬೋಧಕೇತರ ಜವಾಬ್ದಾರಿಗಳನ್ನೂ ಅವರು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ನಡುವೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಶಿಕ್ಷಕರನ್ನೇ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಸರ್ಕಾರದ ಸೂಚನೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಇದು ನಿಜಕ್ಕೂ ಬೇಸರದ ಸಂಗತಿ ಎಂದು ತಿಳಿಸಿದ್ದಾರೆ. ಸರ್ಕಾರದ ಈ ಕ್ರಮದಿಂದ ಶಿಕ್ಷಕರನ್ನು ನಾಯಿಗಳಿಗಿಂತ ಕಡಿಮೆ ಮಟ್ಟದಲ್ಲಿ ನೋಡುತ್ತಿರುವಂತಾಗಿದೆ ಎಂಬ ಅಭಿಪ್ರಾಯವೂ ಮೂಡುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈಗಾಗಲೇ ಶಿಕ್ಷಕರು ಅನೇಕ ಆಡಳಿತಾತ್ಮಕ ಕೆಲಸಗಳಲ್ಲಿ ತೊಡಗಿರುವುದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಾದ ಸಮಯ ಸಿಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹಾಗೂ ಪರೀಕ್ಷಾ ಫಲಿತಾಂಶಗಳ ಮೇಲೂ ಪರಿಣಾಮ ಬೀರುತ್ತಿದೆ ಎಂದು ಹೊರಟ್ಟಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಶಿಕ್ಷಕರ ಕೊರತೆ ಎದುರಿಸುತ್ತಿರುವ ಸಂದರ್ಭದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಸುವ ವಿವಿಧ ಕಾರ್ಯಕ್ರಮಗಳಿಗೆ ಶಿಕ್ಷಕರನ್ನೇ ನಿಯೋಜಿಸಲಾಗುತ್ತಿದೆ. ಮುಂದೆ ನಡೆಯಲಿರುವ ಜನಗಣತಿ ಕಾರ್ಯದಲ್ಲಿಯೂ ಶಿಕ್ಷಕರೇ ಭಾಗವಹಿಸಬೇಕಿರುವ ಹಿನ್ನೆಲೆಯಲ್ಲಿ, ಮತ್ತಷ್ಟು ಹೆಚ್ಚುವರಿ ಹೊಣೆಗಾರಿಕೆ ನೀಡುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆದ್ದರಿಂದ ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm