ಬ್ರೇಕಿಂಗ್ ನ್ಯೂಸ್
13-03-26 12:09 pm HK News Staffer ಕರ್ನಾಟಕ
ಶಿವಮೊಗ್ಗ, ಮಾರ್ಚ್ 13: ಶಿವಮೊಗ್ಗದಿಂದ ಬೆಂಗಳೂರು, ಹುಬ್ಬಳ್ಳಿ ಅಲ್ಲದೇ ದೇಶಾದ್ಯಂತ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ವಿಮಾನ ಸೇವೆಯು ಏಪ್ರಿಲ್ ಅಂತ್ಯಕ್ಕೆ ಕೊನೆಯಾಗುತ್ತಿದೆ. ಇಂಡಿಗೊ ವಿಮಾನ ಸೇವೆಯು ಮೇ 1ರಿಂದ ಶಿವಮೊಗ್ಗದಿಂದ ಇರುವುದಿಲ್ಲ ಎನ್ನುವ ಸೂಚನೆ ಲಭಿಸಿದೆ.
ಪ್ರಸ್ತುತ ಏಪ್ರಿಲ್ 30ರ ವರೆಗಷ್ಟೇ ಇಂಡಿಗೋ ದೇಶೀಯ ವಿಮಾನಗಳಲ್ಲಿ ಆಸನಗಳನ್ನು ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ಮೇ 1ರಿಂದ ವಿಮಾನದ ಬುಕಿಂಗ್ ಲಭ್ಯವಿಲ್ಲದಿರುವುದು ಜನರನ್ನು ಗೊಂದಲಕ್ಕೀಡು ಮಾಡಿದೆ. ಪ್ರಯಾಣಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಇದ್ದರೂ ತಾಂತ್ರಿಕ ಕಾರಣಗಳಿಂದಾಗಿ ಈ ಮಾರ್ಗದ ಸೇವೆಯನ್ನು ಸಂಸ್ಥೆ ಸ್ಥಗಿತಗೊಳಿಸುತ್ತಿದೆ. ಇಂಡಿಗೊ ಸಂಸ್ಥೆಯು ಮುಂಬಯಿ, ಚೆನ್ನೈ, ಹೊಸದಿಲ್ಲಿ, ಅಹಮದಾಬಾದ್, ಹೈದರಾಬಾದ್, ಪಂಜಾಬ್, ಗೋವಾ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶದ 131 ಮಾರ್ಗಗಳಲ್ಲಿ ಸಂಪರ್ಕ ವಿಮಾನ ಸೇವೆಯನ್ನು ಹೊಂದಿದೆ. ಇದು ಬೇರೆ ಸಂಸ್ಥೆಗಳಲ್ಲಿ ಲಭ್ಯವಿಲ್ಲ.
ಹೀಗಾಗಿ, ಜನರ ಬೇಸಿಗೆ ಪ್ರಯಾಣದ ಕನಸಿಗೆ ತಣ್ಣೀರು ಎರಚಿದಂತಾಗಿದೆ. ಲಭ್ಯ ಮಾಹಿತಿ ಪ್ರಕಾರ, ಇತ್ತೀಚೆಗೆ ಅಹಮದಾಬಾದ್ ವಿಮಾನ ದುರಂತದ ಬಳಿಕ ಸೇವೆಯನ್ನು ದೇಶದಲ್ಲಿ ಡಿಜಿಸಿಎ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದಕ್ಕೆ ಪೂರಕವಾಗಿ ವಿಮಾನಯಾನ ಸಂಸ್ಥೆಗಳಿಗೆ ಈಗ ಇರುವ ಮಾರ್ಗಗಳಿಗೆ ಮತ್ತಷ್ಟು ವಿಮಾನಗಳು ಮತ್ತು ಪೈಲಟ್ಗಳ ಅಗತ್ಯವಿದೆ. ಕೆಲವು ವಿಮಾನ ಸಂಸ್ಥೆಗಳು ಕಡಿಮೆ ವಿಮಾನಗಳು ಮತ್ತು ಫೈಲಟ್ಗಳನ್ನು ಬಳಸಿಕೊಂಡು ಹೆಚ್ಚಿನ ಅವಧಿಗೆ ನಿರ್ವಹಣೆ ಮಾಡಿಸಿಕೊಳ್ಳುತ್ತಿವೆ. ವಿಮಾನ ದುರಂತ ಹಿನ್ನೆಲೆಯಲ್ಲಿ ಡಿಜಿಸಿಎ ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನು ಕಠಿಣಗೊಳಿಸಿದೆ. ಇದರಿಂದಾಗಿ ಇಂಡಿಗೋ ಸಂಸ್ಥೆಯು ಸಂಚಾರ ಸೇವೆಗಳನ್ನು ಕಡಿತಗೊಳಿಸುತ್ತಿದೆ.
ಡಿಜಿಸಿಎ ವಿಮಾನಯಾನ ಸೇವಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ಅದರಿಂದಾಗಿ ಇಂಡಿಗೊ ಸಂಸ್ಥೆಗೆ ವಿಮಾನಗಳು ಮತ್ತು ಪೈಲಟ್ ಗಳ ಕೊರತೆ ಎದುರಾಗಿದೆ. ಹೀಗಾಗಿ, ಸಣ್ಣ ಪುಟ್ಟ ಎಟಿಆರ್ ಗಳಲ್ಲಿ ನೀಡುತ್ತಿದ್ದ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಅದರ ಬಗ್ಗೆ ದಿಲ್ಲಿಯಲ್ಲಿರುವ ಇಂಡಿಗೊ ಸಂಸ್ಥೆಯ ವ್ಯವಸ್ಥಾಪಕರ ಜತೆ ಈಗಾಗಲೇ ಒಂದು ಹಂತದ ಮಾತುಕತೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ- ಬೆಂಗಳೂರು ನಡುವಿನ ಇಂಡಿಗೊ ಸೇವೆ ಸ್ಥಗಿತಗೊಳಿಸದಂತೆ ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm