ಬ್ರೇಕಿಂಗ್ ನ್ಯೂಸ್
02-01-21 07:19 pm Prabhakar, Shivamogga ಕರ್ನಾಟಕ
ಶಿವಮೊಗ್ಗ, ಜ.02: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಗ್ರಾ.ಪಂ. ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ತಳ್ಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟೀಕಿಸಿದ್ದಾರೆ.
ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರನ್ನು ಸಕ್ರೆಬೈಲು ಆನೆ ಬಿಡಾರದ ಬಳಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲು, ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿದೆ. ಇದು ಹೋರಾಟಗಳ ನಾಡಾಗಿದ್ದು, ಇಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಸಂಘಟನೆಗೆ ಒಂದು ರೀತಿಯ ಪ್ರಯೋಗ ಶಾಲೆ ಇದ್ದಂತೆ. ಇಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದು ಸ್ವಾಗತ ಎಂದರು.
ಬಿಜೆಪಿಯ ಕಾರ್ಯಕಾರಿಣಿಯ ಸಭೆಯಲ್ಲಿ ಲವ್ ಜಿಹಾದ್, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಬರಬಹುದಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ನಾವು ಅಭೂತಪೂರ್ವ ಯಶಸ್ಸು ಪಡೆದಿದ್ದೇವೆ. ಸುಮಾರು 62 ಸಾವಿರ ಬಿಜೆಪಿ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಶಾಲಿಗಳಾಗಿದ್ದಾರೆ. ಇದು ನಮ್ಮ ಸಂಘಟನೆಗೆ ಮತ್ತಷ್ಟು ಬಲ ತಂದಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರಿದ್ದರು.
The Defeat of Congress in Gram Panchayat Elections 2020 has made them embarrassed slams Naleen Kumar Kateel in Shivamogga.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm