ಬ್ರೇಕಿಂಗ್ ನ್ಯೂಸ್
18-03-26 09:44 am HK News Staffer ಕರ್ನಾಟಕ
ಬೆಂಗಳೂರು, ಮಾ 18: ನಗರದ ಆರ್ಎಂವಿ ಎಕ್ಸ್ಟೆನ್ಶನ್ ಪ್ರದೇಶದ ವೈದ್ಯೆಯೊಬ್ಬರು ತಮ್ಮ ಬ್ಯಾಂಕ್ ಲಾಕರ್ನಿಂದ 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
57 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ, ರಾಷ್ಟ್ರೀಯಕೃತ ಬ್ಯಾಂಕ್ ಶಾಖೆಯಲ್ಲಿ ಸೇವಿಂಗ್ಸ್ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಮಗನ ಮದುವೆ ಹಿನ್ನೆಲೆ ಫೆಬ್ರವರಿ 27ರಂದು ಲಾಕರ್ನಿಂದ ಚಿನ್ನಾಭರಣವನ್ನು ತೆಗೆದಿದ್ದರು.
ಮದುವೆ ಕಾರ್ಯ ಮುಗಿದ ಮಾರ್ಚ್ 3ರಂದು ಬೆಳಿಗ್ಗೆ 11.15ರ ಸುಮಾರಿಗೆ ಮತ್ತೆ ಬ್ಯಾಂಕ್ಗೆ ತೆರಳಿ ಸುಮಾರು 150–160 ಗ್ರಾಂ ತೂಕದ ಚಿನ್ನಾಭರಣ, ಹಾರ, ಚೈನ್, ಜುಂಕಿ ಹಾಗೂ ಎರಡು ಬಳೆಗಳು ಸೇರಿದಂತೆ ಒಟ್ಟು ₹24 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಟ್ರಾನ್ಸರೆಂಟ್ ಪ್ಲಾಸ್ಟಿಕ್ ಡಬ್ಬಿಯಲ್ಲಿ ಇಟ್ಟು ಲಾಕರ್ನಲ್ಲಿ ಭದ್ರಪಡಿಸಿದ್ದರು.
ಆದರೆ ಮಾರ್ಚ್ 12ರಂದು ಉಳಿದ ಆಭರಣಗಳನ್ನು ಇಡಲು ಮತ್ತೆ ಲಾಕರ್ ತೆರೆದಾಗ ಆ ಪ್ಲಾಸ್ಟಿಕ್ ಡಬ್ಬಿಯೇ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾಗಳನ್ನ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ವೈದ್ಯೆ ಲಾಕರ್ ರೂಮ್ಗೆ ಜ್ಯುವೆಲ್ಲರಿ ಬಾಕ್ಸ್ ಹಾಗೂ ಬ್ರೌನ್ ಬ್ಯಾಗ್ ಹಿಡಿದು ಪ್ರವೇಶಿಸಿ, ಹೊರಬರುವಾಗ ಕೇವಲ ಬ್ಯಾಗ್ ಮಾತ್ರ ಹೊಂದಿರುವುದು ಗಮನಕ್ಕೆ ಬಂದಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆ, ವೈದ್ಯೆ ಸದಾಶಿವನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm