ಬ್ರೇಕಿಂಗ್ ನ್ಯೂಸ್
18-03-26 11:38 am HK News Staffer ಕರ್ನಾಟಕ
ಬೆಳಗಾವಿ, ಮಾರ್ಚ್ 18: ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣುಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ನಡೆದಿದೆ. ಮಗು ಪ್ರಿಯಾಂಕಾ ಸಾವಿನ ಹಿಂದೆ ತಂದೆಯೇ ವಿಷಪ್ರಾಶನ ಮಾಡಿರುವ ಸಾಧ್ಯತೆ ಇದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ.
ಹೆರಿಗೆ ಹಿನ್ನೆಲೆಯಲ್ಲಿ ತಾಯಿ ಶೀಲಾ ತವರು ಮನೆಯಲ್ಲಿ ವಾಸವಾಗಿದ್ದರು. ಮಾರ್ಚ್ 17ರಂದು ಮಧ್ಯಾಹ್ನ ಮಗು ಮತ್ತು ಪತ್ನಿಯನ್ನು ಭೇಟಿ ಮಾಡಲು ತಂದೆ ಭೀಮರಾಯ ಬಂದಿದ್ದಾನೆ. ಸ್ವಲ್ಪ ಸಮಯ ಪತ್ನಿ ಹಾಗೂ ಮಗುವಿನೊಂದಿಗೆ ಸಮಯ ಕಳೆದು ಬಳಿಕ ತನ್ನ ಊರಿಗೆ ಮರಳಿದ್ದಾನೆ. ಆದರೆ ಆತ ಹೋದ ಕೆಲವೇ ಹೊತ್ತಿನಲ್ಲಿ ಮಗು ಏಕಾಏಕಿ ಸಾವನ್ನಪ್ಪಿರುವುದು ಕುಟುಂಬವನ್ನು ಬೆಚ್ಚಿಬೀಳಿಸಿದೆ.
ಮಗು ಆರೋಗ್ಯವಾಗಿದ್ದರೂ, ದಿಢೀರ್ ಸಾವಿಗೆ ಕಾರಣ ಏನು ಎಂಬ ಪ್ರಶ್ನೆ ಉದ್ಭವಿಸಿದ ಬೆನ್ನಲ್ಲೇ ತಂದೆಯ ವರ್ತನೆ ಅನುಮಾನಕ್ಕೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಭೀಮರಾಯ ಸಣ್ಣ ಮಾತ್ರೆ ತಂದು ಅದರಿಂದ ಮಗುವಿಗೆ ಏನೋ ಕುಡಿಸಿದ್ದಾನೆ ಎಂಬ ಆರೋಪವನ್ನು ಪತ್ನಿ ಶೀಲಾ ಹಾಗೂ ಆಕೆಯ ಕುಟುಂಬಸ್ಥರು ಮಾಡಿದ್ದಾರೆ.
ಘಟನೆಯ ನಂತರ ಭೀಮರಾಯ ನಾಪತ್ತೆಯಾಗಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಮೃತ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆ ಮುಂದೆ ಇಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ನಾರಾಯಣ್ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಬಳಿಕ ನಿಜಾಂಶ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ. ಸದ್ಯ ಆರೋಪಿ ಭೀಮರಾಯ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm