ಬ್ರೇಕಿಂಗ್ ನ್ಯೂಸ್
18-03-26 07:13 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 18: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿ, ಬಿಜೆಪಿ ಹಾಗೂ ವಿವಿಧ ಸಮುದಾಯ ಸಂಘಟನೆಗಳಿಗೆ ಸೇರಿದ ಒಟ್ಟು 15 ಮಂದಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಹಲವು ಪ್ರಮುಖರ ಹೆಸರುಗಳು ಸೇರಿವೆ.
ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.
ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ನೂರ್ ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು, ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್, ಜಾವೀದ್ ಖುರೇಶಿ, ಮೊಹಮ್ಮದ್ ಫಾಜಿಲ್ ಸೇರಿದಂತೆ ಇತರರ ಹೆಸರುಗಳೂ ಪಟ್ಟಿಯಲ್ಲಿ ಸೇರಿವೆ. ಮೂಡಿಗೆರೆ ಕೌಶಿಕ್ ಗೂ ನೋಟಿಸ್ ಜಾರಿ ಮಾಡಲಾಗಿದೆ.
ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಕೆಲ ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಪಟ್ಟಿಯಲ್ಲಿ ಸೇರಿಸಲಾಗಿದೆ. ಪೊಲೀಸ್ ಇಲಾಖೆಯ ಶಿಫಾರಸ್ಸನ್ನು ಪರಿಗಣಿಸಿರುವ ಉಪ ವಿಭಾಗಾಧಿಕಾರಿ ಅವರು ಈ ಕುರಿತು ವಿಚಾರಣೆ ನಡೆಸಲಿದ್ದು, ವಿಚಾರಣೆಯಲ್ಲಿ ಆರೋಪಿಗಳು ಅಥವಾ ಅವರ ಪರ ವಕೀಲರಿಗೆ ತಮ್ಮ ವಾದ ಮಂಡಿಸಲು ಅವಕಾಶ ನೀಡಲಾಗುತ್ತದೆ.
ವಿಚಾರಣೆಯ ಬಳಿಕ, ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ಅಂತಿಮವಾಗಿ ಗಡಿಪಾರು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
18-03-26 07:13 pm
HK News Staffer
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
ಐಸಿಸ್ ಉಗ್ರರ ನೆಟ್ವರ್ಕ್ ; ಉತ್ತರ ಪ್ರದೇಶ ಎಟಿಎಸ್ ಪ...
18-03-26 01:05 pm
ಅಶ್ಲೀಲ ಪೆನ್ಡ್ರೈವ್ ವಿಡಿಯೋ ಪ್ರಕರಣ ; 13,712 ಪುಟ...
18-03-26 12:17 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 03:38 pm
HK News Staffer
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am