ಬ್ರೇಕಿಂಗ್ ನ್ಯೂಸ್
21-03-26 08:29 pm HK News Staffer ಕರ್ನಾಟಕ
ದಾವಣಗೆರೆ, ಮಾ 21: ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದಿದೆ.
ನಮಾಜ್ ಮಾಡುವ ವೇಳೆ ಹೆಜ್ಜೇನು ಗೂಡಿಗೆ ಯಾರೋ ಕಲ್ಲಿನಿಂದ ಹೊಡೆದ ಪರಿಣಾಮ ಅವಾಂತರ ಸೃಷ್ಟಿಯಾಗಿದೆ. ಈ ವೇಳೆ ನಮಾಜ್ ಮಾಡ್ತಿದ್ದ ಮುಸ್ಲಿಂ ಬಾಂಧವರ ಮೇಲೆ ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದು, ಜನ ಧಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ.
ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಐವರು ಎನ್ಐಸಿಯುನಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಾಗಿ ಯುವಕರು, ಮಕ್ಕಳು, ಹೆಣ್ಣುಮಕ್ಕಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಮಾಯಕೊಂಡ ಶಾಸಕ ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಈ ಕುರಿತು ಮಾತನಾಡಿದ ಅವರು, 'ವೃದ್ಧರು, ಮಕ್ಕಳು, ಯುವಕರ ಮೇಲೆ ಜೇನು ದಾಳಿ ಮಾಡಿದ್ದು, ಅವರೀಗ ತೊಂದರೆಯಲ್ಲಿದ್ದಾರೆ. ಈಗಾಗಲೇ ಚಿಕಿತ್ಸೆ ಕೊಡಿಸಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ಗಾಯಾಳುಗಳನ್ನು ಕರೆತರಲಾಗುತ್ತಿದೆ. ಮತ್ತಷ್ಟು ಜನರಿಗೆ ಆನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಹೆಜ್ಜೇನು ದಾಳಿ ಮಾಡಿದ್ದರಿಂದ ವೃದ್ಧರ ಪರಿಸ್ಥಿತಿ ಚಿಂತಾಜನಕವಾಗಿದೆ. ಈದ್ ನ ನಮಾಜ್ ಮಾಡುವ ವೇಳೆ ಮಕ್ಕಳು ಹೆಜ್ಜೇನನ್ನು ಏಳಿಸಿ ಬಿಟ್ಟಿದ್ದಾರೆ. ಹೀಗಾಗಿ, ಅಲ್ಲಿದ್ದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಐದಾರು ಜನರು ಹೆಚ್ಚು ಸೀರಿಯಸ್ ಇದ್ದಾರೆ. ವೃದ್ಧರು ತಡೆದುಕೊಳ್ಳುತ್ತಿಲ್ಲ' ಎಂದು ತಿಳಿಸಿದರು.
ಗ್ರಾ. ಪಂ. ಸದಸ್ಯ ನಸ್ರುಲ್ಲಾ ಅವರು ಮಾತನಾಡಿ, 'ಹೆಜ್ಜೇನಿಗೆ ಯಾರೋ ಹುಡುಗರು ಕಲ್ಲು ಹೊಡೆದಿದ್ದಾರೆ. ಏನ್ ಆಗಿದೆ ಗೊತ್ತಿಲ್ಲ. ಅಚಾನಕ್ ಆಗಿದೆ, ನಮಗೆ ಗೊತ್ತಿದ್ದರೆ ಏನಾದರೂ ಮಾಡ್ತಿದ್ದೆವು. ಈಗಾಗಲೇ ಆನಗೋಡು ಆಸ್ಪತ್ರೆಯಲ್ಲಿ ತೋರಿಸಿದ್ದೇವೆ. ಒಬ್ಬೊಬ್ಬರೆ ಆಸ್ಪತ್ರೆಗೆ ಬರುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರಿಗೂ ಕಚ್ಚಿದ್ದರಿಂದಾಗಿ ಅವರು ಓಡಿಹೋಗಿದ್ದಾರೆ' ಎಂದು ತಿಳಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm