ಬ್ರೇಕಿಂಗ್ ನ್ಯೂಸ್
22-03-26 11:44 am HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 21: ಗ್ಯಾಸ್ ಸಿಲಿಂಡರ್ ಗಳಿಲ್ಲದೆ ಪರದಾಡುತ್ತಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಣಿಜ್ಯ ಬಳಕೆ LPG ಸಿಲಿಂಡರ್ ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಿದೆ. ಇರಾನ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬೆನ್ನಲ್ಲೇ ಎಲ್ ಪಿಜಿ ಹೆಚ್ಚಳದ ಆದೇಶ ಹೊರಬಿದ್ದಿದೆ.
ಮನೆಗಳಿಗೆ ಪೂರೈಸುವ ಅಡುಗೆ ಅನಿಲ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ತರಲು ಸಹಾಯವಾಗುತ್ತಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ಕಳೆದ ಮೂರು ವಾರಗಳಿಂದ ನಡೆಯುತ್ತಿರುವ ಗಲ್ಫ್ ಯುದ್ಧದಿಂದಾಗಿ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಮನೆಗಳಿಗೆ ಎಲ್ ಪಿಜಿ ಸರಬರಾಜು ಮಾಡಲು ಆದ್ಯತೆ ನೀಡಲು ಹೋಟೆಲ್ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಎಲ್ಪಿಜಿ ಸರಬರಾಜಿನಲ್ಲಿ ಕಡಿತ ಮಾಡಲಾಗಿತ್ತು.
ಇದೀಗ ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಡಾ 50ಕ್ಕೆ ತಲುಪಲಿದೆ. ಮಾರ್ಚ್ 23ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ವಾಣಿಜ್ಯ ಬಳಕೆ LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದ ವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.
ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಢಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm