ಬ್ರೇಕಿಂಗ್ ನ್ಯೂಸ್
27-03-26 04:04 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 27: ಹತ್ತಿರದ ದಾರಿಯೆಂದು ಚಾಲಕನೊಬ್ಬ ಟ್ರ್ಯಾಕ್ಟರ್'ನ್ನು ತುಂಗಭದ್ರಾ ನದಿಗೆ ನುಗ್ಗಿಸಿದ್ದು, ಪರಿಣಾಮ ಅದರಲ್ಲಿದ್ದ 10ಕ್ಕೂ ಹೆಚ್ಚು ಮಂದಿ ನದಿ ಮಧ್ಯೆ ಸಿಲುಕಿ ಜೀವ ಭಯದಲ್ಲಿ ಪರದಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಮೂಲದ ಭಕ್ತರಿದ್ದ ವಾಹನ ತುಂಗಭದ್ರಾ ನದಿ ದಾಟಿ ಸಿಂಗಟಾಳೂರು ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಹೀಗೆ ಹೋದರೆ ತಡವಾಗುತ್ತೆ ಎಂದು ಶಾರ್ಟ್ಕಟ್ ಆಯ್ಕೆ ಮಾಡಿಕೊಂಡಿದ್ದಾರೆ. ಚಾಲಕನೂ ನೀರಿನ ಮಟ್ಟ ಕಡಿಮೆ ಇದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಎಲ್ಲರೂ ಟ್ರ್ಯಾಕ್ಟರ್ ಮೂಲಕ ನದಿಯನ್ನು ದಾಟಲು ಮುಂದಾಗಿದ್ದರು.

ಆದರೆ, ಟ್ರ್ಯಾಕ್ಟರ್ ನದಿ ಮಧ್ಯ ತಲುಪಿದಾಗ ಚಾಲಕ ಗಾಬರಿಗೊಂಡಿದ್ದಾನೆ. ಇದೇ ವೇಳೆ ನೀರಿನ ಮಟ್ಟ ಹೆಚ್ಚಾಗಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮುಳುಗಲು ಆರಂಭಿಸಿತ್ತು. ನೀರು ಕುತ್ತಿಗೆಯ ಮಟ್ಟಕ್ಕೆ ತಲುಪುತ್ತಿದ್ದಂತೆ ಭಕ್ತರು ಭಯದಿಂದ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಮೀನುಗಾರರು ತಕ್ಷಣ ಧಾವಿಸಿ, ತಮ್ಮ ಜೀವದ ಹಂಗು ತೊರೆದು ಎಲ್ಲ ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್ ಅನ್ನು ನದಿಯಿಂದ ಹೊರಕ್ಕೆಳೆದಿದ್ದಾರೆ. ಘಟನೆ ಕುರಿತು ಟ್ರ್ಯಾಕ್ಟರ್ ನಲ್ಲಿದ್ದ ಭಕ್ತನೋರ್ವ ಪ್ರತಿಕ್ರಿಯಿಸಿ, ಚಾಲಕನ ಮಾತು ನಂಬಿ ನಾವು ಒಪ್ಪಿದ್ದೆವು. ನಮಗೆ ಅಪಾಯ ಇದೆ ಎಂದು ತಿಳಿದಿದ್ದರೂ ಹೋಗಿದ್ದೆವು. ದೇವರ ಕೃಪೆಯಿಂದ ಬದುಕಿದ್ದೇವೆ. ನಮ್ಮನ್ನು ರಕ್ಷಿಸಿದ ಮೀನುಗಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm